ಕೋಳಿಯಿಂದ ಕೊರೋನಾ ವೈರಸ್‌ ಹರಡುವುದಿಲ್ಲ -Vishwanews24

ನವದೆಹಲಿ: ವೈಜ್ಞಾನಿಕ ಮತ್ತು ವೈದ್ಯಕೀಯ ದೃಷ್ಟಿಕೋನದಿಂದ, ಭಾರತದಲ್ಲಿರಲಿ ಅಥವಾ ಬೇರೆಡೆ ಇರಲಿ, ವೈರಸ್ ಕೋಳಿಯಿಂದ ಹರಡುವುದಿಲ್ಲ. ದಯವಿಟ್ಟು ಅಂತಹ ಸಂದೇಶಗಳನ್ನು ರವಾನೆ ಮಾಡಬೇಡಿ ಅಥವಾ ಹಂಚಿಕೊಳ್ಳಬೇಡಿ ಎಂದು ಕೋಳಿ ಉದ್ಯಮ ಪಶುವೈದ್ಯರ ಸಂಸ್ಥೆಯ ಅಧ್ಯಕ್ಷ ಡಾ.ಜಿ.ದೇವೇಗೌಡ ಹೇಳಿದ್ದಾರೆ.

ಟಿಎನ್‌ಎಂ ಜೊತೆ ಮಾತನಾಡಿದ ಬೆಂಗಳೂರು ಜಿಲ್ಲಾ ಆರೋಗ್ಯ ಅಧಿಕಾರಿ, ಸೋಂಕಿತ ವ್ಯಕ್ತಿಗಳು ಅಥವಾ ವಾಹಕಗಳಿಂದ ಗಾಳಿಯ ಹನಿಗಳ ಮೂಲಕ ವೈರಸ್ ಹರಡುತ್ತದೆ. ಕೊರೋನಾ ವೈರಸ್‌ ಏಕಾಏಕಿ ಪ್ರಾರಂಭವಾದಾಗಿನಿಂದ ಇಂತಹ ಹಲವಾರು ನಕಲಿ ಸಲಹೆಗಳು ಹಾಗೂ ಎಚ್ಚರಿಕೆಗಳನ್ನು ವಾಟ್ಸಾಪ್‌ನಲ್ಲಿ ಹರಿದಾಡುತ್ತಿವೆ.ಆದರೆ ಈ ವಿಚಾರವಾಗಿ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಅಧಿಕಾರಿಗಳು ಹೇಳಿಕೆ ನೀಡಿದ ಬಳಿಕವೂ ಇದೇ ರೀತಿಯ ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದರು.

ಕಳೆದ ಕೆಲವು ದಿನಗಳಿಂದ ಬ್ರಾಯ್ಲರ್ ಕೋಳಿಗಳು ಕೊರೋನಾ ವೈರಸ್‌ ಹರಡುತ್ತಿವೆ ಎಂಬ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿರುವುದನ್ನು ಗಮನಿಸಿದ್ದೇವೆ. ಈ ರೀತಿಯಾದ ಸುದ್ದಿಯನ್ನು ತಿಳಿಯಲು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಜಿಎಚ್‌ಎಂಸಿಯ ಮುಖ್ಯ ಪಶುವೈದ್ಯ ಅಧಿಕಾರಿ ಡಾ.ಪಿ.ವೆಂಕಟೇಶ್ವರ ರೆಡ್ಡಿ ಅವರು ಹೇಳಿದ್ದಾರೆ.

ಫೆ.10 ಸೋಮವಾರದಂದು ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಕೇಂದ್ರ ಪ್ರಾಣಿ ಪಶು ಸಚಿವಾಲಯ, ಕೋಳಿಗಳು ಕೊರೋನಾ ವೈರಸ್‌‌‌ ಹರಡುತ್ತಿವೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ವರದಿಯಲ್ಲಿ ಈವರೆಗೆ ದೃಢೀಕರಿಸದ ಕಾರಣ ಕೋಳಿಗಳು ಸುರಕ್ಷಿತ ಎಂದು ಪರಿಗಣಿಸಬಹುದು ಎಂದು ತಿಳಿಸಿದ್ದಾರೆ.

ಕೋಳಿಗಳು ಕೊರೋನಾ ವೈರಸ್‌‌ ಹರಡುತ್ತಿವೆ ಎಂದು ಯಾವುದೇ ವರದಿಯಲ್ಲಿ ದೃಢಪಟ್ಟಿಲ್ಲ ಎಂದು ಪಶುಸಂಗೋಪನಾ ಆಯುಕ್ತ ಪ್ರವೀಣ್ ಮಲಿಕ್ ಅವರು ಸೋಮವಾರ ಭಾರತದ ಪೌಲ್ಟ್ರಿ ಫೆಡರೇಶನ್‌ನ ಸಲಹೆಗಾರ ವಿಜಯ್ ಸರ್ಡಾನ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago