ನವದೆಹಲಿ: ಮರಣ ಪ್ರಮಾಣಪತ್ರದಲ್ಲಿ ಸಾವಿಗೆ ಕಾರಣ ನೀಡಿಲ್ಲ ಎಂಬ ಕಾರಣ ಮುಂದಿಟ್ಟು ಕೋವಿಡ್ನಿಂದ ಮೃತಪಟ್ಟವರಿಗೆ ₹50 ಸಾವಿರ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಶಿಫಾರಸು ಮಾಡಿದಂತೆ ಕೋವಿಡ್ನಿಂದ ಮೃತಪಟ್ಟವರಿಗೆ ₹50 ಸಾವಿರ ಎಕ್ಸ್ಗ್ರೇಷಿಯಾ ಪರಿಹಾರ ನೀಡಬೇಕು. ಕೋವಿಡ್ನಿಂದ ಸಾವು ಸಂಭವಿಸಿದೆ ಎಂದು ಸೂಚಿಸಿ ಪ್ರಮಾಣಪತ್ರ ಸಲ್ಲಿಸಿದ 30 ದಿನಗಳ ಒಳಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಈ ಪರಿಹಾರ ಮೊತ್ತವನ್ನು ಪಾವತಿಸಬೇಕು ಎಂದು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ಪೀಠ ಹೇಳಿತು.
ದ.ಕ : ಶ್ರೀ ಕ್ಷೇತ್ರ ಕಟೀಲು ಹಾಗೂ ಪೊಳಲಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ -Vishwanews2
ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ವಿಷಯಕ್ಕೆ ಅತಿ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಸಹ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿತು.
ಎನ್ಡಿಎಂಎ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಒಪ್ಪಿಕೊಂಡ ಪೀಠ, ಈಗಾಗಲೇ ಮರಣ ಪ್ರಮಾಣಪತ್ರ ನೀಡಲಾಗಿದ್ದರೆ, ನೊಂದ ಕುಟುಂಬ ಸೂಕ್ತ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ ಎಂದು ಪೀಠ ಹೇಳಿತು.
ಆರ್ಟಿಪಿಸಿಆರ್ ಪರೀಕ್ಷೆಯಂತಹ ಅಗತ್ಯ ದಾಖಲೆಗಳೊಂದಿಗೆ ಮರಣ ಪ್ರಮಾಣಪತ್ರವನ್ನು ಬದಲಿಸಬಹುದಾಗಿದೆ ಎಂದು ಹೇಳಿದ ಪೀಠ, ನೊಂದ ಕುಟುಂಬಗಳಿಗೆ ಮತ್ತೂ ತೊಡಕು ಮುಂದುವರಿದಿದ್ದೇ ಆದರೆ ಕುಂದುಕೊರತೆ ಪರಿಹಾರ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಲಹೆ ನೀಡಿತು.
‘ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂಬ ಉಲ್ಲೇಖ ಮರಣ ಪ್ರಮಾಣಪತ್ರದಲ್ಲಿ ಇಲ್ಲ ಎಂಬ ಕಾರಣ ನೀಡಿ ಎಕ್ಸಗ್ರೇಷಿಯಾ ಪರಿಹಾರವನ್ನು ನೀಡುವುದಿಲ್ಲ ಎಂದು ಯಾವ ರಾಜ್ಯವೂ ಹೇಳುವಂತಿಲ್ಲ. ದೂರು ಪರಿಹಾರ ಸಮಿತಿಯು ಮೃತ ರೋಗಿಗಳ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿ 30 ದಿನಗಳೊಳಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸೂಚನೆ ನೀಡಬೇಕು’ ಎಂದು ಪೀಠ ನಿರ್ದೇಶನ ನೀಡಿತು.
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…