Featured

ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು : ಸುಪ್ರೀಂ – Vishwanews24

ಮರಣ ಪ್ರಮಾಣಪತ್ರದಲ್ಲಿ ಸಾವಿಗೆ ಕಾರಣ ನೀಡಿಲ್ಲ ಎಂಬ ಕಾರಣ ಮುಂದಿಟ್ಟು ಕೋವಿಡ್‌ನಿಂದ ಮೃತಪಟ್ಟವರಿಗೆ ₹50 ಸಾವಿರ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು : ಸುಪ್ರೀಂ

ನವದೆಹಲಿ: ಮರಣ ಪ್ರಮಾಣಪತ್ರದಲ್ಲಿ ಸಾವಿಗೆ ಕಾರಣ ನೀಡಿಲ್ಲ ಎಂಬ ಕಾರಣ ಮುಂದಿಟ್ಟು ಕೋವಿಡ್‌ನಿಂದ ಮೃತಪಟ್ಟವರಿಗೆ ₹50 ಸಾವಿರ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶಿಫಾರಸು ಮಾಡಿದಂತೆ ಕೋವಿಡ್‌ನಿಂದ ಮೃತಪಟ್ಟವರಿಗೆ ₹50 ಸಾವಿರ ಎಕ್ಸ್‌ಗ್ರೇಷಿಯಾ ಪರಿಹಾರ ನೀಡಬೇಕು. ಕೋವಿಡ್‌ನಿಂದ ಸಾವು ಸಂಭವಿಸಿದೆ ಎಂದು ಸೂಚಿಸಿ ಪ್ರಮಾಣಪತ್ರ ಸಲ್ಲಿಸಿದ 30 ದಿನಗಳ ಒಳಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಈ ಪರಿಹಾರ ಮೊತ್ತವನ್ನು ಪಾವತಿಸಬೇಕು ಎಂದು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್‌.ಬೋಪಣ್ಣ ಅವರಿದ್ದ ಪೀಠ ಹೇಳಿತು.

ದ.ಕ : ಶ್ರೀ ಕ್ಷೇತ್ರ ಕಟೀಲು ಹಾಗೂ ಪೊಳಲಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ -Vishwanews2

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ವಿಷಯಕ್ಕೆ ಅತಿ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಸಹ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿತು.

ಎನ್‌ಡಿಎಂಎ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಒಪ್ಪಿಕೊಂಡ ಪೀಠ, ಈಗಾಗಲೇ ಮರಣ ಪ್ರಮಾಣಪತ್ರ ನೀಡಲಾಗಿದ್ದರೆ, ನೊಂದ ಕುಟುಂಬ ಸೂಕ್ತ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ ಎಂದು ಪೀಠ ಹೇಳಿತು.

ಆರ್‌ಟಿಪಿಸಿಆರ್ ಪರೀಕ್ಷೆಯಂತಹ ಅಗತ್ಯ ದಾಖಲೆಗಳೊಂದಿಗೆ ಮರಣ ಪ್ರಮಾಣಪತ್ರವನ್ನು ಬದಲಿಸಬಹುದಾಗಿದೆ ಎಂದು ಹೇಳಿದ ಪೀಠ, ನೊಂದ ಕುಟುಂಬಗಳಿಗೆ ಮತ್ತೂ ತೊಡಕು ಮುಂದುವರಿದಿದ್ದೇ ಆದರೆ ಕುಂದುಕೊರತೆ ಪರಿಹಾರ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಲಹೆ ನೀಡಿತು.‌

‘ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂಬ ಉಲ್ಲೇಖ ಮರಣ ಪ್ರಮಾಣಪತ್ರದಲ್ಲಿ ಇಲ್ಲ ಎಂಬ ಕಾರಣ ನೀಡಿ ಎಕ್ಸಗ್ರೇಷಿಯಾ ‍‍‍ಪರಿಹಾರವನ್ನು ನೀಡುವುದಿಲ್ಲ ಎಂದು ಯಾವ ರಾಜ್ಯವೂ ಹೇಳುವಂತಿಲ್ಲ. ದೂರು ಪರಿಹಾರ ಸಮಿತಿಯು ಮೃತ ರೋಗಿಗಳ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿ 30 ದಿನಗಳೊಳಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸೂಚನೆ ನೀಡಬೇ‍ಕು’ ಎಂದು ಪೀಠ ನಿರ್ದೇಶನ ನೀಡಿತು.

ಪ್ರಿಯಾಂಕಾ ಗಾಂಧಿಗೆ ಗೃಹಬಂಧನ : ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

7 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

9 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

10 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

10 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

10 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

10 hours ago