Featured

ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರೆ ಇನ್ಮುಂದೆ ಆನ್‌ಲೈನ್‌ನಲ್ಲೇ ನಿಮ್ಮ ವರದಿ ಪಡೆದುಕೊಳ್ಳಿ -Vishwanews24

ಬೆಂಗಳೂರು:  ಕೋವಿಡ್‌ ಪರೀಕ್ಷೆಗೆ ಒಳಪಟ್ಟವರು ಇನ್ಮುಂದೆ ಆನ್‌ಲೈನ್‌ನಲ್ಲೇ ತಮ್ಮ ವರದಿ ಪಡೆದುಕೊಳ್ಳಬಹುದು. ಸರ್ಕಾರದ ಕೋವಿಡ್‌ ವಾರ್‌ ರೂಂ ಅಭಿವೃದ್ಧಿಪಡಿಸಿರುವ ವೆಬ್‌ ಪೋರ್ಟಲ್‌: https://www.covidwar.karnataka.gov.in/service1 ನಲ್ಲಿ ತಮ್ಮ ಎಸ್‌ಆರ್‌ಎಫ್‌ ಐಡಿ ನಂಬರ್‌ (ಮಾದರಿ ಉಲ್ಲೇಖಿತ ಅರ್ಜಿ ಸಂಖ್ಯೆ) ದಾಖಲಿಸಿ ವರದಿ ವೀಕ್ಷಿಸಬಹುದು.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.

ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು” ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.

ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್‍ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಕೋವಿಡ್‌ ಪರೀಕ್ಷೆ ಫಲಿತಾಂಶ ವೀಕ್ಷಿಸುವ ವೆಬ್‌ ಪೋರ್ಟಲ್ ವಿಳಾಸ: https://www.covidwar.karnataka.gov.in/service1

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago