ಕೋವಿಡ್‌ ವಿರುದ್ಧದ ಹೋರಾಟ  ಹಾಗೂ ಭವಿಷ್ಯದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಅಮೆರಿಕದಿಂದ ಭಾರತಕ್ಕೆ ₹304 ಕೋಟಿ ನೆರವು -Vishwanews24

ಕೋವಿಡ್‌ ವಿರುದ್ಧದ ಹೋರಾಟ  ಹಾಗೂ ಭವಿಷ್ಯದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಅಮೆರಿಕದಿಂದ ಭಾರತಕ್ಕೆ ₹304 ಕೋಟಿ ನೆರವು -Vishwanews24

ವಾಷಿಂಗ್ಟನ್‌: ಕೋವಿಡ್‌–19 ಸಾಂಕ್ರಾಮಿಕದ ವಿರುದ್ಧದ ಹೋರಾಟ ಹಾಗೂ ಭವಿಷ್ಯದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಬೇಕಾಗುವ ಸಿದ್ಧತೆಗಾಗಿ ಭಾರತಕ್ಕೆ ಹೆಚ್ಚುವರಿಯಾಗಿ ₹304 ಕೋಟಿ (41 ದಶಲಕ್ಷ ಡಾಲರ್) ಆರ್ಥಿಕ ಬೆಂಬಲವನ್ನು ಅಮೆರಿಕ ಪ್ರಕಟಿಸಿದೆ.

ಈ ಮೂಲಕ ಕೋವಿಡ್‌–19 ಸಾಂಕ್ರಾಮಿಕದ ಆರಂಭವಾದಾಗಿನಿಂದ ಇಲ್ಲಿವರೆಗೆ, ಅಮೆರಿಕ ಭಾರತಕ್ಕೆ ನೀಡಿರುವ ಒಟ್ಟು ಆರ್ಥಿಕ ನೆರವಿನ ಪ್ರಮಾಣ ₹1484 ಕೋಟಿ (200 ದಶಲಕ್ಷ ಡಾಲರ್‌)ಯಷ್ಟಾಗಿದೆ.

ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಭಾರತ, ಕೋವಿಡ್‌ ಎರಡನೇ ಅಲೆ ವಿರುದ್ಧ ತೀವ್ರವಾಗಿ ಹೋರಾಟ ನಡೆಸಿತು. ಪ್ರತಿ ದಿನ 3 ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆ ಎದುರಾಯಿತು.

‘ಇಂಥ ತುರ್ತು ಸಂದರ್ಭಗಳಲ್ಲಿ ಅಮೆರಿಕ ಭಾರತಕ್ಕೆ ನೆರವು ನೀಡಿತ್ತು. ಈಗಲೂ ಕೋವಿಡ್‌–19 ವಿರುದ್ಧದ ಭಾರತದ ಹೋರಾಟದಲ್ಲಿಅಮೆರಿಕ ನೆರವನ್ನು ಮುಂದುವರಿಸಿದೆ‘ ಎಂದು ಅಮೆರಿಕದ ಅಂತರರರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ ಸೋಮವಾರ ತಿಳಿಸಿದೆ.

ಪ್ರಸ್ತುತ ಕೋವಿಡ್‌–19 ವಿರುದ್ಧದ ಹೋರಾಟ ಹಾಗೂ ಭವಿಷ್ಯದ ಆರೋಗ್ಯ ತುರ್ತುಪರಿಸ್ಥಿತಿ ಎದುರಿಸುವ ಸಿದ್ಧತೆಗಾಗಿ ಭಾರತಕ್ಕೆ ಹೆಚ್ಚುವರಿ₹304 ಕೋಟಿ ಆರ್ಥಿಕ ನೆರವು ನೀಡುತ್ತಿರುವುದಾಗಿ ಅಮೆರಿಕದ ಅಂತರರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ (ಯುಎಸ್‌ಎಐಡಿ) ಪ್ರಕಟಿಸಿದೆ

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago