ಕೋವಿಡ್ ಅಕ್ರಮ: ಸುಧಾಕರ್ ವಿರುದ್ಧ ಸರ್ಕಾ ರ ಮುಲಾಜಿಲ್ಲದೇ ಕ್ರಮ: ಶಾಸಕ ಪ್ರದೀಪ್ ಈಶ್ವರ್ – vishwanews24

Featured, ರಾಜ್ಯ ನ್ಯೂಸ್

ಕೋವಿಡ್ ಅಕ್ರಮ: ಸುಧಾಕರ್ ವಿರುದ್ಧ ಸರ್ಕಾ ರ ಮುಲಾಜಿಲ್ಲದೇ ಕ್ರಮ: ಶಾಸಕ ಪ್ರದೀಪ್ ಈಶ್ವರ್

ಬೆಂಗಳೂರು: ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ ವಿರುದ್ಧ ಸರ್ಕಾ ರ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾ ರ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಅವರು ತಾತ್ಕಾಲಿಕವಾಗಿ ಸ್ವಲ್ಪ ದಿನ ತಳ್ಳಬಹುದು.ಯಾವತ್ತಾದೂ ಒಂದು ದಿನ ಸುಧಾಕರ್ ಅವರ ಕುತ್ತಿಗೆಗೆ ಬಂದೇ ಬರುತ್ತದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ತಪ್ಪುಗಳು ಆಗಿವೆ. ತಪ್ಪು ಮಾಡಿದವರಿಗೆ ಕಾನೂನು ಪ್ರಕಾರಯಾವಾಗ ಶಿಕ್ಷೆ ಸಿಗುತ್ತದೆಯೋ ಗೊತ್ತಿಲ್ಲ. ಆದರೆ, ಕೋವಿಡ್ ಕಳ್ಳರಿಗೆ ಜನತಾ ನ್ಯಾಯಾಲಯ ಶಿಕ್ಷೆ ನೀಡಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಖಡಕ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಲೈಂಗಿಕ ದೌರ್ಜನ್ಯ ಪ್ರಕರಣ : ಸ್ಪಷ್ಟನೆ ನೀಡಿದ ಮಲಯಾಳಂ ನಟ ನಿವಿನ್ ಪೌಲಿ – vishwanews24

Leave a Reply