Featured

ಕೋವಿಡ್ ನಿಯಮ ಉಲ್ಲಂಘನೆ :ಮುಂಬೈ ಕ್ಲಬ್‌ಗೆ ಪೊಲೀಸರ ದಾಳಿ: ಕ್ರಿಕೆಟಿಗ ಸುರೇಶ್ ರೈನಾ, ಸಹಿತ ಹಲವರ ಬಂಧನ ; ಬಿಡುಗಡೆ  -Vishwanews24

ಕೋವಿಡ್ ನಿಯಮ ಉಲ್ಲಂಘನೆ :ಮುಂಬೈ ಕ್ಲಬ್‌ಗೆ ಪೊಲೀಸರ ದಾಳಿ: ಕ್ರಿಕೆಟಿಗ ಸುರೇಶ್ ರೈನಾ, ಸಹಿತ ಹಲವರ ಬಂಧನ ; ಬಿಡುಗಡೆ  -Vishwanews24

ಮುಂಬೈ,: ಮುಂಬೈಯ ಕ್ಲಬ್‌ವೊಂದಕ್ಕೆ ದಾಳಿ ಮಾಡಿರುವ ಮುಂಬೈ ಪೊಲೀಸರು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ಸುರೇಶ್ ರೈನಾ, ಸುಸೇನ್ ಖಾನ್ ಮತ್ತು ಗಾಯಕ ಗುರು ರಾಂಧವ ಸೇರಿದಂತೆ ಸುಮಾರು 34 ಮಂದಿಯನ್ನು ಬಂಧಿಸಿದ್ದಾರೆ.

ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮುಂಬೈ ಡ್ರಾಗನ್ ಫ್ಲೈ ಕ್ಲಬ್​ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಇದನ್ನು ಅರಿತ ಪೊಲೀಸರು ಇಲ್ಲಿಗೆ ರೈಡ್ ಮಾಡಿದ್ದು ಸುರೇಶ್ ರೈನಾ, ಖ್ಯಾತ ಗಾಯಕ ಗುರು ರಾಂಧವ ಸೇರಿದಂತೆ ಒಟ್ಟು 34 ಜನರನ್ನು ನಿನ್ನೆ ತಡ ರಾತ್ರಿ ಬಂಧಿಸಿದ್ದಾರೆ.

ಸದ್ಯ ಸುರೇಶ್ ರೈನಾ ಜಾಮೀನಿನಲ್ಲಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಬಂಧಿಸಿರುವ 34 ಜನರಲ್ಲಿ ಏಳು ಜನ ಕ್ಲಬ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಎನ್ನಲಾಗಿದೆ. ಈ ಬಗ್ಗೆ ಎಸ್​ಆರ್​​ ಪಿ ಸಹಾರ್ ಪೊಲೀಸರು ಖಚಿತ ಮಾಹಿತಿ ನೀಡಿದ್ದಾರೆ.

ಮುಂಬೈ ವಿಮಾನ ನಿಲ್ದಾಣದ ಸಮೀಪದ ಡ್ರ್ಯಾಗನ್‌ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು, ಸುರೇಶ್ ರೈನಾ, ನಟ ಹೃತಿಕ್ ರೋಷನ್ ಪತ್ನಿ ಸುಸೇನ್ ಖಾನ್ ಮತ್ತು ಗುರು ರಾಂಧವ ಸೇರಿದಂತೆ ಅನೇಕರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಸುರೇಶ್ ರೈನಾ ಮತ್ತು ಇತರರು ಸೇರಿದಂತೆ 34 ಜನರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188, 269, 34ರ ಅಡಿ, ಬಾಂಬೆ ಪೊಲೀಸ್ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ಕಾಯ್ದೆಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಡ್ರ್ಯಾಗನ್‌ಫ್ಲೈ ಕ್ಲಬ್‌ನಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುತ್ತಿರಲಿಲ್ಲ ಮತ್ತು ಕ್ಲಬ್ ನಡೆಸಲು ನೀಡಲಾಗಿದ್ದ ಸಮಯದ ಗಡುವನ್ನು ಮೀರಿ ತೆರೆಯಲಾಗಿತ್ತು ಎಂದು ಸಹಾರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago