ಉಡುಪಿ : ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರಂತೆ ಜಿಲ್ಲೆಯಲ್ಲಿ ಕೋವಿಡ್ ನ ಹೊಸ ರೂಪಾಂತರಿ ಪ್ರಸರಣ ತಡೆಗೆ ಅಗತ್ಯ ವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸರ್ಕಾರದ ಹೊಸ ಮಾರ್ಗಸೂಚಿಯಂತೆ ಉಡುಪಿ ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆ ಗುರಿ 3000 ದಿಂದ 4000 ಹೆಚ್ಚಿಸಿ ನಿಗದಿಪಡಿಸಲಾಗಿದೆ. ರೋಗಲಕ್ಷಣ ಹೊಂದಿರುವವರು ili/sari ಪ್ರಕರಣಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿರುವವರು ಮತ್ತು ಹೈ ರಿಸ್ಕ್ ಹೊಂದಿರುವ ಗುಂಪಿನ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸುವುದು ಮತ್ತು ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು.
ಈ ಕೆಳಕಂಡ ಗುಂಪಿನವರಿಗೆ ಪಾಕ್ಷಿಕವಾಗಿ Random ಪರೀಕ್ಷೆ ನಡೆಸಲಾಗುತ್ತದೆ. ಪ್ರೌಢಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ. ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳ ಸಿಬ್ಬಂದಿ. ಮಾಲ್ ಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು. ಕ್ಯಾಟರಿಂಗ್ ಸಿಬ್ಬಂದಿ ಮತ್ತು ಮನೆಮನೆಗಳಿಗೆ ವಿತರಣೆ ಮಾಡುವ ಸಿಬ್ಬಂದಿ. ಕಾರ್ಖಾನೆಗಳ ಸಿಬ್ಬಂದಿ. ಎಲ್ಲಾ ಕಚೇರಿಗಳ ಸಿಬ್ಬಂದಿ. ಪಬ್ ಮತ್ತು ಬಾರ್ ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ. ಕೆಲವೊಂದು ಸಂದರ್ಭಗಳಲ್ಲಿ ಸಾರ್ವಜನಿಕರು ಗುಂಪು ಸೇರಿದಾಗ.
ನಿಗದಿಪಡಿಸಿದ ಗುರಿಯಲ್ಲಿ ಶೇಕಡ 50 ರಷ್ಟು ಜಿಲ್ಲಾ ಕೇಂದ್ರದಲ್ಲಿ ಮತ್ತು ಉಳಿದ 50 ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ಮಾಡುವುದು. ಪರೀಕ್ಷೆಯಲ್ಲಿ ಶೇಕಡ 10 ರಷ್ಟು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸುವುದು. ಐಸಿಎಂಆರ್ ಮಾರ್ಗಸೂಚಿ ಪ್ರಕಾರ ಎಲ್ಲಾ ರೋಗಲಕ್ಷಣ ಸಹಿತ ಪ್ರಕರಣಗಳನ್ನು ಮೊದಲಿಗೆ Rat ಪರೀಕ್ಷೆಗೆ ಒಳಪಡಿಸುವುದು, ಫಲಿತಾಂಶ ನೆಗಟಿವ್ ಬಂದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡುವುದು. ರೋಗಲಕ್ಷಣ ಇಲ್ಲದವರಿಗೆ Rat ಪರೀಕ್ಷೆ ಮಾಡಬಾರದು .
ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ದೇಶಗಳಲ್ಲಿ ಕೋವಿಡ್ ನ ರೂಪಾಂತರಿ ಪ್ರಭೇದ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರನ್ನು ತಪಾಸಣೆ ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ.
ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ನಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ RTPCR ಪರೀಕ್ಷೆ ಮಾಡಬೇಕು ಮತ್ತು ನೆಗೆಟಿವ್ ವರದಿ ಬಂದ ನಂತರವೇ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅನುಮತಿಸಬೇಕು. ಈ ಮೂರು ದೇಶಗಳಿಂದ ಕಳೆದ 15 ದಿನಗಳಿಂದ ಈಚೆಗೆ ಬಂದಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ RTPCR ಪರೀಕ್ಷೆಗೆ ಒಳಪಡಿಸಬೇಕು. ಪ್ರಯಾಣಿಕರು ಕೋವಿಡ್ ಸೋಂಕಿತ ಆಗಿದ್ದಲ್ಲಿ ಅವರನ್ನು 10 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಪ್ರತ್ಯೇಕತೆಗೆ ಒಳಪಡಿಸಬೇಕು.ಪಾಸಿಟಿವ್ ಬಂದಿರುವ ಪರೀಕ್ಷಾ ಮಾದರಿಗಳನ್ನು ಕಡ್ಡಾಯವಾಗಿ ತಕ್ಷಣ ಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು. ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಪರೀಕ್ಷೆಗೆ ಒಳಪಡಬೇಕು.
ಜಿಲ್ಲೆಯಲ್ಲಿ ಈ ಮೇಲ್ಕಂಡ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಥಮ ಆದ್ಯತೆ ಎಂದು ಪರಿಗಣಿಸಿ , ಆರೋಗ್ಯ ಇಲಾಖೆ ಮತ್ತು ಇತರ ಪ್ರಮುಖ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಹಾಗೂ ಜಿಲ್ಲಾಡಳಿತದ ಸೂಕ್ತ ಮಾರ್ಗದರ್ಶನ ಮತ್ತು ನಿಗಾವಣೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…