Featured

ಕೋವಿಡ್‌ ಪ್ರಕರಣ ಹೆಚ್ಚಳ : ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ : ರಾಜ್ಯ ಸರಕಾರ ಆದೇಶ – Vishwnaews24

ಕೋವಿಡ್‌ ಪ್ರಕರಣ ಹೆಚ್ಚಳ : ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ : ರಾಜ್ಯ ಸರಕಾರ ಆದೇಶ

ಬೆಂಗಳೂರು: ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ವಾಹನಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.

ಪ್ರಸ್ತುತ, ರಾಜ್ಯದಲ್ಲಿ ಕಳೆದ 10 ದಿನಗಳಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದ್ದು, ದಿನಾಂಕ: 9,5,2022 ರಂದು 471 ಪ್ರಕರಣಗಳು ಹಾಗು ಪಾಸಿಟಿವ್ ಪ್ರಮಾಣ 2,14, ವರದಿಯಾಗಿದೆ. ಕೋವಿಡ್ 19 ನ ಮೂರನೇ ಅಲೆಯ ನಂತರದ ಅವಧಿಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ.

1. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದನ್ನು ಉಲ್ಲೇಖ (3) ರ ಅನ್ವಯ ಕಡ್ಡಾಯಗೊಳಸಲಾಗಿದ್ದು, ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು,

2. ಮುಚ್ಚಿದ ಸಂರಚನೆಯನ್ನು Closed areas) ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕಫೆಟೇರಿಯಾ/ ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳು ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ / ಆಡಳತಗಳ ಜವಾಬ್ದಾರಿಯಾಗಿರುತ್ತದೆ.

3. ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲ ( ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

4. ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.

5. ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು.

ಕೋವಿಡ್ 19, ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

 

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

6 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

6 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

7 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

7 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago