Featured

ಕೋವಿಡ್ ಮೂರನೇ ಅಲೆ : ಭಾರತದಲ್ಲಿ ಮುಂಬರುವ ಹಬ್ಬದ ಸೀಸನ್ ನಲ್ಲಿ ಸ್ಥಳೀಯ ನಿರ್ಬಂಧ ವಿಧಿಸಿ : ಕೇಂದ್ರ ಸೂಚನೆ -Vishwanews24

ಕೋವಿಡ್ ಮೂರನೇ ಅಲೆ : ಭಾರತದಲ್ಲಿ ಮುಂಬರುವ ಹಬ್ಬದ ಸೀಸನ್ ನಲ್ಲಿ ಸ್ಥಳೀಯ ನಿರ್ಬಂಧ ವಿಧಿಸಿ : ಕೇಂದ್ರ ಸೂಚನೆ -Vishwanews24

 

ನವದೆಹಲಿ : ಕೋವಿಡ್ ಮೂರನೇ ಅಲೆಯ ಭೀತಿ ನಮ್ಮ ಮುಂದಿದ್ದು ಭಾರತದಲ್ಲಿ ಮುಂಬರುವ ಹಬ್ಬದ ಸೀಸನ್ ನಲ್ಲಿ ಕರೋನವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ‘ಮುಂಬರುವ ಹಬ್ಬದ ಸೀಸನ್ ನಲ್ಲಿ ಯಾವುದೇ ದೊಡ್ಡ ದೊಡ್ಡ ಕೂಟಗಳು ನಡೆಯದಂತೆ ಖಚಿತಪಡಿಸಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಕೊರೋನವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸಬೇಕು ಎಂದು ಹೇಳಿದ್ದಾರೆ.

ಕೋವಿಡ್ -19 ಮಾರ್ಗಸೂಚಿಗಳನ್ನು ಇನ್ನೂ ಒಂದು ತಿಂಗಳ ಕಾಲ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಎಂದು ಹೇಳಿರುವ ಅವರು ಹಲವು ರಾಜ್ಯಗಳಲ್ಲಿ ಕಂಡುಬರುವ ಸ್ಥಳೀಯ ಹರಡುವಿಕೆಯನ್ನು ಹೊರತುಪಡಿಸಿ, ಒಟ್ಟಾರೆ ಸಾಂಕ್ರಾಮಿಕ ಪರಿಸ್ಥಿತಿಯು ರಾಷ್ಟ್ರೀಯ ಮಟ್ಟದಲ್ಲಿ ಈಗ ಹೆಚ್ಚು ಸ್ಥಿರವಾಗಿದೆ ಎಂದು ತೋರುತ್ತದೆ ಎಂದು ವಿವರಿಸಿದ್ದಾರೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು, ತಮ್ಮ ಜಿಲ್ಲೆಗಳಲ್ಲಿ ಎಲ್ಲಿ ಪಾಸಿಟಿವಿಟಿ ದರ ಹೆಚ್ಚಿದೆಯೋ ಅಲ್ಲಿ ಪ್ರಕರಣಗಳ ಹೆಚ್ಚಳವನ್ನು ಪರಿಣಾಮಕಾರಿಯಾಗಿ ಕಡಿಮೆಗೊಳಿಸಲು ಮತ್ತು ಪ್ರಸರಣದ ಹರಡುವಿಕೆಯನ್ನು ತಡೆಗಟ್ಟಲು ಸಕ್ರಿಯ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಬೇಕು.

“ಸಂಭಾವ್ಯ ಉಲ್ಬಣಗಳ ಎಚ್ಚರಿಕೆಯ ಚಿಹ್ನೆಗಳನ್ನು ಮುಂಚಿತವಾಗಿ ಗುರುತಿಸುವುದು ಮತ್ತು ಹರಡುವಿಕೆಯನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

9 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

9 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

10 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

12 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

12 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

12 hours ago