ಕೋವಿಡ್-19 ಲಸಿಕಾ ಪ್ರಮಾಣಪತ್ರಗಳಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದಲೇ ಚುನಾಯಿತರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವಿರುವುದರಲ್ಲಿ ತಪ್ಪೇನಿದೆ ಎಂದು ಕೇರಳ ಹೈಕೋರ್ಟ್ ಪ್ರಶ್ನಿಸಿದೆ.
ಪ್ರಮಾಣ ಪತ್ರದಿಂದ ಪ್ರಧಾನಿ ಭಾವಚಿತ್ರವನ್ನು ತೆಗೆದುಹಾಕಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ಪ್ರಾಪ್ತತೆಯನ್ನು ಪರೀಕ್ಷಿಸಿದ ಹೈಕೋರ್ಟ್ನ ನ್ಯಾಯಾಧೀಶ ಪಿವಿ ಕುನ್ಹಿಕೃಷ್ಣನ್, ಪ್ರಧಾನಿಯ ಬಗ್ಗೆ ತಮಗೇನಾದರೂ ನಾಚಿಕೆ ಪಡುವಂಥದ್ದು ಇದೆಯೇ ಎಂದು ಅರ್ಜಿದಾರರನ್ನು ಪ್ರಶ್ನಿಸಿದ್ದಾರೆ.
ದೇಶದ ಜನರಿಂದಲೇ ಚುನಾಯಿತರಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನ ಮಂತ್ರಿಯ ಭಾವಚಿತ್ರವನ್ನು ಪ್ರಮಾಣ ಪತ್ರದಲ್ಲಿ ಇಡುವುದು ತಪ್ಪೇನಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಅನ್ಯ ದೇಶಗಳಲ್ಲಿ ಇಂಥ ಅಭ್ಯಾಸವಿಲ್ಲದೇ ಇರುವ ವಿಷಯವನ್ನು ಅರ್ಜಿದಾರರ ಪರ ವಕೀಲರು ಮುಂದಿಟ್ಟ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ಅವರಿಗೆ ತಮ್ಮ ಪ್ರಧಾನಿಗಳ ಮೇಲೆ ಹೆಮ್ಮೆ ಇಲ್ಲದೇ ಇರಬಹುದು, ನಮಗೆ ಹೆಮ್ಮೆ ಇದೆ” ಎಂದಿದ್ದಾರೆ.
“ನೀವೇಕೆ ಪ್ರಧಾನಿಯ ಬಗ್ಗೆ ನಾಚಿಕೆ ಪಡುತ್ತಿದ್ದೀರಿ ? ಜನರಿಂದ ಪಡೆದ ಬಹುಮತದಿಂದಲೇ ಅವರು ಅಧಿಕಾರಕ್ಕೆ ಬಂದಿದ್ದಾರೆ.. ನಮಗೆ ಭಿನ್ನವಾದ ರಾಜಕೀಯ ನಿಲುವುಗಳು ಇರಬಹುದು, ಆದರೆ ಅವರು ನಮ್ಮ ಪ್ರಧಾನ ಮಂತ್ರಿ” ಎಂದು ಕೋರ್ಟ್ ಮುಂದುವರೆದು ಹೇಳಿದೆ.
ಪ್ರಮಾಣ ಪತ್ರದಲ್ಲಿ ಪ್ರಧಾನಿಯ ಭಾವಚಿತ್ರವು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದ್ದು, ಮತದಾರರ ಮನಗಳ ಮೇಲೆ ಇದು ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ತಿಳಿಸಿದ ಅರ್ಜಿದಾರರ ಪರ ವಕೀಲ ಅಜಿತ್ ಜೋಯ್, ರಾಜಕೀಯ ಭಿನ್ನಭಿಪ್ರಾಯಗಳಿಗಿಂತಲೂ, ಸಾರ್ವಜನಿಕ ದುಡ್ಡಿನಲ್ಲಿ ಮಾಡುವ ಅಭಿಯಾನಗಳ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳ ದೃಷ್ಟಿಯಿಂದ ನೋಡಬೇಕಾಗಿದೆ ಎಂದಿದ್ದಾರೆ.
ಅರ್ಜಿಯಲ್ಲಿ ಯಾವುದಾದರೂ ಪ್ರಾಪ್ತ ವಾದಗಳಿವೆಯೇ ಎಂದು ಪರಿಶೀಲಿಸಿ ನೋಡುವುದಾಗಿ ನ್ಯಾಯಾಲಯ ತಿಳಿಸಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…