Featured

ಕೋವಿಡ್ ಸಂಕಷ್ಟ: ಉದ್ಯೋಗ ವಂಚಿತರಿಗೆ ಇ-ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮಕ್ಕೆ ನಟ ಸೋನು ಸೊದ್ ಚಾಲನೆ -Vishwanews24

ಕೋವಿಡ್ ಸಂಕಷ್ಟ: ಉದ್ಯೋಗ ವಂಚಿತರಿಗೆ ಇ-ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮಕ್ಕೆ ನಟ ಸೋನು ಸೊದ್ ಚಾಲನೆ -Vishwanews24

ಮುಂಬೈ: ಕೊರೋನಾ ವೈರಸ್ ಸಾಂಕ್ರಾಮಿಕದ ವೇಳೆ ಬದುಕಿನ ಮೂಲವನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ದುರ್ಬಲ ಜನರಿಗೆ ಇ- ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮವೊಂದನ್ನು ಬಾಲಿವುಡ್ ನಟ ಸೋನು ಸೊದ್  ಚಾಲನೆ ನೀಡಿದ್ದಾರೆ.

‘ದಬಾಂಗ್’  ‘ಜೋಧಾ ಅಕ್ಬರ್’ ಮತ್ತು ‘ಸಿಂಬಾ’ ಚಿತ್ರಗಳ ಮೂಲಕ ಹೆಸರಾಗಿರುವ ಸೋನು ಸೋದ್, ಈ ವರ್ಷದ ಆರಂಭದಲ್ಲಿ ಕೊರೋನಾವೈರಸ್  ಕಾಣಿಸಿಕೊಂಡ ನಂತರ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮನೆಗಳಿಗೆ ತಲುಪಲು ಪರಿತಪಿಸುತ್ತಿದ್ದ ವಲಸೆ ಜನರು ತಮ್ಮೂರಿಗೆ ಮರಳಲು ಸೋನ್ ಸೊದ್ ತಮ್ಮ ಸ್ವಂತ ಹಣದಲ್ಲಿ  ಬಸ್ ಗಳ ವ್ಯವಸ್ಥೆ ಮಾಡಿದ್ದರು.

‘ಖುದ್ ಕಮಾವೊ ಘರ್ ಚಲಾವೊ’ ಎಂಬ ಹೆಸರಿನ ಈ ಕಾರ್ಯಕ್ರಮ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದು
ಸೋನ್ ಸೊದ್ ಹೇಳಿದ್ದಾರೆ.

ಏನನ್ನಾದರೂ ನೀಡುವುದಕ್ಕಿಂತಲೂ ಉದ್ಯೋಗ ಒದಗಿಸುವುದು ಪ್ರಮುಖವಾದದ್ದು ಎಂಬುದರಲ್ಲಿ ನಂಬಿಕೆ ಹೊಂದಿದ್ದು, ಈ ಕಾರ್ಯಕ್ರಮ ಅವರನ್ನು ಸ್ವಾವಲಂಬಿಗಳನ್ನಾ ಮಾಡುವ ಮೂಲಕ ಮತ್ತೆ ತ್ಮ ಕಾಲುಗಳ ಮೇಲೆ ನಿಲ್ಲಲು ಸಹಾಯ ಮಾಡುತ್ತದೆ ಎಂಬ ವಿಶ್ವಾಸ ಇರುವುದಾಗಿ ಸೊದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾಂಕ್ರಾಮಿಕದ ವೇಳೆ ಉದ್ಯೋಗ ಕಳೆದುಕೊಂಡವರನ್ನು ಕಂಪನಿಗಳಿಗೆ ಸಂಪರ್ಕಿಸುವುದು ಮತ್ತು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಈ ಹಿಂದೆ ಪ್ರವಾಸಿ ರೋಜ್ಗಾರ್ ಆ್ಯಪ್ ನ್ನು ಸಹ ಸೋನು ಸೊದ್ ಪ್ರಾರಂಭಿಸಿದ್ದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago