ಉಡುಪಿ : ಕೋವಿಡ್ 1 ಮತ್ತು 2 ರ ಅವಧಿಯಲ್ಲಿ ಲಸಿಕೆ ವಿತರಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲೆಯಲ್ಲಿ ಮಾಡಿರುವ ಕೆಲಸ ಕಾರ್ಯಗಳು” ಮಾತ್ರ ಮುಖ್ಯವೇ ಹೊರತು ಕಾಂಗ್ರೆಸ್ ನ ಅಪಪ್ರಚಾರವನ್ನು ನಾಗರೀಕರು ನಂಬುವುದಿಲ್ಲ. ಜಿಲ್ಲೆಯಲ್ಲಿ ವೈದ್ಯಕೀಯ ಪರಿಕರ ಹಂಚಿಕೆ, ದಿನಸಿ ಕಿಟ್ ಹಂಚಿಕೆ, ಕೋವಿಡ್ ಪೀಡಿತರ ಮನೆಗೆ ಹೋಗಿ ನೀಡಿರುವ ಸಾಂತ್ವಾನ, ಅವರಿಗೆ ನೀಡಿರುವ ಔಷದಿ ಕಿಟ್, ಪಲ್ಸ್ ಮೀಟರ್, ಮಾಸ್ಕ್ ಮತ್ತು ಲಸಿಕಾ ಕೇಂದ್ರದಲ್ಲಿ ಸ್ವಯಂ ಸೇವಕರಂತೆ ಕೆಲಸ ಮಾಡುವ ಪಕ್ಷದ ಕಾರ್ಯಕರ್ತರ ಕೆಲಸಗಳನ್ನು ಸಾರ್ವಜನಿಕರು ಮಾತನಾಡುತ್ತಾರೆ ವಿನಃ, ಏನೂ ಕೆಲಸ ಮಾಡದೆ ಬೀದಿಯಲ್ಲಿ ನಿಂತು ಕೆಲಸ ಮಾಡುವುದೇ ಕಾಂಗ್ರೆಸ್ ನ ಸಾಧನೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ವಿಷಯದಲ್ಲೂ ರಾಜಕೀಯ ಮಾಡುವ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೂ ದೇಶದ ಬಗ್ಗೆ ಪ್ರೀತಿ ಇಲ್ಲದೇ ಕೇವಲ ಕುಟುಂಬದ ಬಗ್ಗೆ ಪ್ರೀತಿಯಿಂದ ಕೆಲಸ ಮಾಡುವುದು ಮಾತ್ರ ಕಾಯಕಮಾಡಿಕೊಂಡಿದೆ. ನೈಜ ಕಾಳಜಿ ಇದ್ದರೆ ಕಾಂಗ್ರೆಸ್ ತಾವು ಕೋವಿಡ್ ಸಂಬಂಧಪಟ್ಟ ಪರಿಕರ ಹಾಗೂ ಕಿಟ್ ಗಳ ಬಗ್ಗೆ ಚರ್ಚೆಗೆ ಬರಲಿ ಜಿಲ್ಲೆಯಲ್ಲಿ ಅಕ್ಷರಶ 800 ಅಧಿಕ ಬಿಜೆಪಿ ಕಾರ್ಯಕರ್ತರು ಲಸಿಕಾ ಕೇಂದ್ರದಲ್ಲಿ, ಅಂತ್ಯ ಸಂಸ್ಕಾರದಲ್ಲಿ ಅಂಬುಲೆನ್ಸ್ ಗಳಲ್ಲಿ ಕೋವಿಟ್ ಪೀಡಿತರ ಮನೆ ಮನೆ ಬೇಟಿಯಲ್ಲಿ ತೊಡಗಿಸಿಕೊಂಡಿರುವಾಗ ಕೇವಲ ಆಪಾದನೆ ಮಾಡುವ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಗೆ ಜನ ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಕುಯಿಲಾಡಿ ಹೇಳಿದ್ದಾರೆ.
ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ…
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…