Featured

ಕೋವಿಡ್‌ ಹೆಚ್ಚಳ : ಆರೋಗ್ಯ ಇಲಾಖೆಯಿಂದ  ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

ಕೋವಿಡ್‌ ಹೆಚ್ಚಳ : ಆರೋಗ್ಯ ಇಲಾಖೆಯಿಂದ  ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ

ಬೆಂಗಳೂರು: ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್‌ ಆಗಿದ್ದು, ಶಾಲೆಗಳಿಗೆ ಹೊಸ ಮಾರ್ಗಸೂಚಿ  ಬಿಡುಗಡೆ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
* ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
* ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
* ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
* ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
* ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ
ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago