Featured

ಕೋವಿಡ್-19ರ ಅಲೆಯನ್ನು ತಗ್ಗಿಸುವಲ್ಲಿ ಜನರ ಸಹಕಾರದೊಂದಿಗೆ ಶ್ರಮಿಸಿ ಸರ್ಕಾರ ಯಶಸ್ವಿಯಾಗಿದೆ : ರಾಜ್ಯಪಾಲ ವಜುಭಾಯಿ​​​ ವಾಲಾ -Vishwanews24

ಕೋವಿಡ್-19ರ ಅಲೆಯನ್ನು ತಗ್ಗಿಸುವಲ್ಲಿ ಜನರ ಸಹಕಾರದೊಂದಿಗೆ ಶ್ರಮಿಸಿ ಸರ್ಕಾರ ಯಶಸ್ವಿಯಾಗಿದೆ : ರಾಜ್ಯಪಾಲ ವಜುಭಾಯಿ​​​ ವಾಲಾ -Vishwanews24

ಬೆಂಗಳೂರು: ‘ಕೋವಿಡ್-19ರ ಅಲೆಯನ್ನು ತಗ್ಗಿಸುವಲ್ಲಿ ಜನರ ಸಹಕಾರದೊಂದಿಗೆ ಹಗಲಿರುಳು ಶ್ರಮಿಸಿ. ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ’ ಎಂದು ರಾಜ್ಯಪಾಲ ವಜುಭಾಯಿ​​​ ವಾಲಾ ಹೇಳಿದರು.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮಂಗಳವಾರ ನಡೆದ 72 ನೇ ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೋವಿಡ್‌ ಬಿಕ್ಕಟ್ಟಿನ ಅವಕಾಶವನ್ನು ನಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲಸೌಕರ್ಯ ಹಾಗೂ ಪಿ.ಪಿ.ಇ. ಕಿಟ್, ವೆಂಟಿಲೇಟರ್ ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ನರೇಂದ್ರ ಮೋದಿಯವರು ದೂರದರ್ಶಿತ್ವ ‘ಆತ್ಮ ನಿರ್ಭರ್ ಭಾರತ್’ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆ’ ಎಂದು ಬಣ್ಣಿಸಿದರು.

‘ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತೇನೆ. ಇದೊಂದು ಶತ್ರುವಿನ ವಿರುದ್ಧ ಪಡೆದ ಜಯವಾಗಿದೆ. 2020ರಲ್ಲಿ ಹಿಂದೆಂದೂ ಕಂಡರಿಯದ ಕೋವಿಡ್-19ರ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ, ನಾವು ನವ ಚೈತನ್ಯ ಮತ್ತು ಆಶೋತ್ತರದೊಂದಿಗೆ ಹೊಸ ವರ್ಷ 2021ಕ್ಕೆ ಹೆಜ್ಜೆ ಇರಿಸಿದ್ದೇವೆ’ ಎಂದೂ ವಾಲಾ ಹೇಳಿದರು.

ಇದನ್ನೂ ಓದಿ : ತೀವ್ರಗೊಂಡ ರೈತರ ಪ್ರತಿಭಟನೆ : ಪೊಲೀಸರಿಂದ ರೈತರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ -Vishwanews24

ಸಾಂಪ್ರದಾಯಿಕ ಗುಜರಾತಿ ಪೇಟಾ ಧರಿಸಿ, ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಂದಿದ್ದ ವಾಲಾ ರಾಜ್ಯದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದರು. ಸುಮಾರು 40 ನಿಮಿಷಗಳಲ್ಲಿ ಮುಕ್ತಾಯವಾದ ಕಾರ್ಯಕ್ರಮದಲ್ಲಿ 12 ಪುಟಗಳ ಭಾಷಣವನ್ನು ರಾಜ್ಯಪಾಲರು ಓದಿದರು. ತಮ್ಮ ಭಾಷಣದಲ್ಲಿ ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳನ್ನು ಹೊಗಳುವ ಮೂಲಕ ಸರ್ಕಾರದ ಬೆನ್ನು ತಟ್ಟಿದರು.

‘ಕೋವಿಡ್ ಕೊನೆಯ ಹಂತಕ್ಕೆ ತಲುಪಿದ್ದೇವೆ. ಹಾಗೆಂದು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ದೈಹಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಬಳಕೆ ಕಡ್ಡಾಯ’ ಎಂದೂ ಅವರು ಸಲಹೆ ನೀಡಿದರು.

ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಬಂದ ರಾಜ್ಯಪಾಲರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದರು. ನಂತರ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ : ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಜೆಸಿ ಮಾಧುಸ್ವಾಮಿ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

6 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

6 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

7 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

7 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

7 hours ago