ಬೆಂಗಳೂರು: ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಸರ್ಕಾರ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ.ಎಂದಿನಂತೆ ಕ್ಲಬ್ ಪಬ್ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಚರ್ಚ್ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತ ಕಾಯುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.
ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…