Featured

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ – Vishwanews24

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ

ಹೊಸದಿಲ್ಲಿ: ಈಗಾಗಲೇ ಕೋವಿಡ್-19  ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂಬ ಅಂಶವನ್ನು ದೇಶದ ಲಸಿಕಾ ಕಾರ್ಯಪಡೆ ಮುಖ್ಯಸ್ಥರು NDTVಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಇನ್‍ಕೊವ್ಯಾಕ್  ಲಸಿಕೆಯನ್ನು ಕಳೆದ ವಾರ ಕೋವಿನ್ ಪ್ಲಾಟ್‍ಫಾರಂನಲ್ಲಿ ಪರಿಚಯಿಸಲಾಗಿತ್ತು. “ಇದನ್ನು ಬೂಸ್ಟರ್ ಡೋಸ್ ಆಗಿ ಶಿಫಾರಸ್ಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿ ಈಗಾಗಲೇ ಮುಂಜಾಗ್ರತಾ ಡೋಸ್ ಪಡೆದಿದ್ದಲ್ಲಿ, ಮೂಗಿನ ಮೂಲಕ ನೀಡುವ ಡೋಸನ್ನು ಅವರಿಗೆ ಶಿಫಾರಸ್ಸು ಮಾಡಲಾಗದು. ಇದುವರೆಗೂ ಬೂಸ್ಟರ್ ಡೋಸ್ ಪಡೆಯದವರಿಗಾಗಿ ಈ ಡೋಸ್ ಇದೆ” ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಸ್ಪಷ್ಟಪಡಿಸಿದ್ದಾರೆ.

“ಲಸಿಕಾ ಕಾರ್ಯಕ್ರಮದ ಅಂಗವಾಗಿ ಕೋವಿನ್ ಪೋರ್ಟೆಲ್ ನಾಲ್ಕನೇ ಡೋಸ್ ಅನ್ನು ಸ್ವೀಕರಿಸುವುದಿಲ್ಲ. ಒಬ್ಬ ವ್ಯಕ್ತಿ ನಾಲ್ಕನೇ ಡೋಸ್ ಪಡೆಯಲು ಬಯಸುತ್ತಾರೆ ಎಂದುಕೊಳ್ಳೋಣ. ಆಯಂಟಿಜಿನ್ ಸಿಂಕ್ ಎಂಬ ಒಂದು ಪರಿಕಲ್ಪನೆ ಇದೆ. ಒಬ್ಬ ವ್ಯಕ್ತಿಗೆ ಪದೇ ಪದೇ ನಿರ್ದಿಷ್ಟ ಬಗೆಯ ಆಯಂಟಿಜಿನ್ ಪ್ರತಿರೋಧ ಲಸಿಕೆ ನೀಡಿದಲ್ಲಿ ದೇಹ ಅದಕ್ಕೆ ಸ್ಪಂದಿಸುವುದು ನಿಲ್ಲಿಸುತ್ತದೆ ಅಥವಾ ತೀರಾ ಕಳಪೆಯಾಗಿ ಸ್ಪಂದಿಸುತ್ತದೆ. ಆದ್ದರಿಂದ ಆರಂಭದಲ್ಲಿ ಎಂಆರ್ ಎನ್‍ಎ ಲಸಿಕೆಗಳನ್ನು ಆರು ತಿಂಗಳ ಅಂತರದಲ್ಲಿ ನೀಡಲಾಗಿತ್ತು. ಬಳಿಕ ಜನ ಮೂರು ತಿಂಗಳ ಅಂತರದಲ್ಲಿ ಪಡೆದಿದ್ದಾರೆ. ಆದರೆ ಅದು ಇಂಥ ಪ್ರಕರಣಗಳಲ್ಲಿ ಭಾರಿ ಪ್ರಯೋಜನವಾಗಿದೆ. ಆದ್ದರಿಂದ ತಕ್ಷಣಕ್ಕೆ ನಾಲ್ಕನೇ ಡೋಸ್ ಪಡೆಯುವುದರಲ್ಲಿ ಅರ್ಥವಿಲ್ಲ” ಎಂದು ವಿಶ್ಲೇಷಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago