Featured

ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24

ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24

ಕೆನಡಾ/ಒಟ್ಟಾವಾ: ಭಾರತ ಮತ್ತು ಪಾಕಿಸ್ತಾನದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ 19 ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎರಡು ದೇಶಗಳಿಂದ ಆಗಮಿಸುವ ಎಲ್ಲಾ ನಾಗರಿಕ ವಿಮಾನಯಾನ ಕೆನಡಾ 30 ದಿನಗಳ ಕಾಲ ನಿಷೇಧಿಸಿರುವುದಾಗಿ ಸಾರಿಗೆ ಸಚಿವ ಒಮರ್ ಅಲ್ಘಾಬ್ರಾ ತಿಳಿಸಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದಿಂದ ಕೆನಡಾಕ್ಕೆ ವಿಮಾನದಲ್ಲಿ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕೋವಿಡ್ 19 ಸೋಂಕು ಭಾರೀ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂದಿನ 30 ದಿನಗಳ ಕಾಲ ಎರಡೂ ದೇಶಗಳಿಂದ ಕೆನಡಾಕ್ಕೆ ಆಗಮಿಸುವ ಎಲ್ಲಾ ವಾಣಿಜ್ಯ ಮತ್ತು ಖಾಸಗಿ ನಾಗರಿಕ ವಿಮಾನಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ” ಒಮರ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಭಾರತದಲ್ಲಿ ಕೋವಿಡ್ ಸೋಂಕು ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಈ ಕ್ರಮವನ್ನು ತೆಗೆದುಕೊಂಡಿದ್ದವೆ, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ನಂತರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಒಮರ್ ತಿಳಿಸಿದ್ದಾರೆ.

ಉಡುಪಿ : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಈ ನಿಷೇಧ ಶುಕ್ರವಾರದಿಂದಲೇ (ಏಪ್ರಿಲ್ 23) ಜಾರಿಯಾಗಲಿದೆ. ಆದರೆ ಈ ನಿರ್ಬಂಧ ಸರಕು ಸಾಗಾಣೆ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದಿರುವ ಒಮರ್, ಲಸಿಕೆ, ರಕ್ಷಣಾ ಉಪಕರಣ ಮತ್ತು ಅಗತ್ಯ ವಸ್ತುಗಳ ಸರಬರಾಜು ನಿರಾತಂಕವಾಗಿ ಮುಂದುವರಿಯಲಿದೆ ಎಂದು ಹೇಳಿದರು.

ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ

ಲಂಡನ್ನಿನ ಹೀಥ್ರೂ ಏರ್‌ಪೋರ್ಟ್‌ಗೆ ಆಗಮಿಸುವ ಭಾರತದ ಹೆಚ್ಚುವರಿ ವಿಮಾನಗಳಿಗೆ ಇಂಗ್ಲೆಂಡ್‌ ಸರ್ಕಾರ ನಿರಾಕರಣೆ ಹೇಳಿದೆ. ಅಲ್ಲದೆ, ವಿಮಾನ ಸಂಚಾರಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್‌ನ‌ ಹೌಸ್‌ ಆಫ್ ಕಾಮನ್ಸ್‌, ಭಾರತವನ್ನು ಕೆಂಪು ಪಟ್ಟಿಗೆ ಸೇರಿಸಲು ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿರುವ ಕಾರಣ, ಮುನ್ನೆಚ್ಚರಿಕೆಯಾಗಿ ಈ ಕ್ರಮ ಅನಿವಾರ್ಯ ಜರುಗಿಸಿದೆ.

ಶೇ.30 ವಿಮಾನ ಇಳಿಕೆ: ಭಾರತದಿಂದ ಆಗಮಿಸುವ ವಿಮಾನಗಳ ಸಂಖ್ಯೆ ಶೇ.30 ಕಡಿತಗೊಳಿಸಲು ಆಸ್ಟ್ರೇಲಿಯಾ ನಿರ್ಧರಿಸಿದೆ. ಭಾರತದಂಥ ಹೈ -ರಿಸ್ಕ್ ದೇಶಗಳಿಗೆ ಪ್ರಯಾಣಿಸದಂತೆ ಸೂಚಿಸಿದೆ. ಯುಎಇ ನಿರ್ಬಂಧ: ಭಾರತ ಸೇರಿದಂತೆ 20 ರಾಷ್ಟ್ರಗಳ ವಿಮಾನ ಸಂಚಾರಕ್ಕೆ ಯುಎಇ ನಿರ್ಬಂಧ ವಿಸ್ತರಿಸಿದೆ. ಈಗಾಗಲೇ ಯುಎಇ ಫೆಬ್ರವರಿಯಲ್ಲೇ ಕೆಲವು ರಾಷ್ಟ್ರಗಳ ವಿಮಾನಗಳಿಗೆ ನಿರ್ಬಂಧ ವಿಧಿಸಿತ್ತು. ಮೇ 17ರವರೆಗೆ ಈ ಆದೇಶವಿರಲಿದೆ.

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago