Featured

ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24

ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24

ಕೆನಡಾ/ಒಟ್ಟಾವಾ: ಭಾರತ ಮತ್ತು ಪಾಕಿಸ್ತಾನದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ 19 ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎರಡು ದೇಶಗಳಿಂದ ಆಗಮಿಸುವ ಎಲ್ಲಾ ನಾಗರಿಕ ವಿಮಾನಯಾನ ಕೆನಡಾ 30 ದಿನಗಳ ಕಾಲ ನಿಷೇಧಿಸಿರುವುದಾಗಿ ಸಾರಿಗೆ ಸಚಿವ ಒಮರ್ ಅಲ್ಘಾಬ್ರಾ ತಿಳಿಸಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದಿಂದ ಕೆನಡಾಕ್ಕೆ ವಿಮಾನದಲ್ಲಿ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕೋವಿಡ್ 19 ಸೋಂಕು ಭಾರೀ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂದಿನ 30 ದಿನಗಳ ಕಾಲ ಎರಡೂ ದೇಶಗಳಿಂದ ಕೆನಡಾಕ್ಕೆ ಆಗಮಿಸುವ ಎಲ್ಲಾ ವಾಣಿಜ್ಯ ಮತ್ತು ಖಾಸಗಿ ನಾಗರಿಕ ವಿಮಾನಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ” ಒಮರ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಭಾರತದಲ್ಲಿ ಕೋವಿಡ್ ಸೋಂಕು ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಈ ಕ್ರಮವನ್ನು ತೆಗೆದುಕೊಂಡಿದ್ದವೆ, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ನಂತರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಒಮರ್ ತಿಳಿಸಿದ್ದಾರೆ.

ಉಡುಪಿ : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಈ ನಿಷೇಧ ಶುಕ್ರವಾರದಿಂದಲೇ (ಏಪ್ರಿಲ್ 23) ಜಾರಿಯಾಗಲಿದೆ. ಆದರೆ ಈ ನಿರ್ಬಂಧ ಸರಕು ಸಾಗಾಣೆ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದಿರುವ ಒಮರ್, ಲಸಿಕೆ, ರಕ್ಷಣಾ ಉಪಕರಣ ಮತ್ತು ಅಗತ್ಯ ವಸ್ತುಗಳ ಸರಬರಾಜು ನಿರಾತಂಕವಾಗಿ ಮುಂದುವರಿಯಲಿದೆ ಎಂದು ಹೇಳಿದರು.

ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ

ಲಂಡನ್ನಿನ ಹೀಥ್ರೂ ಏರ್‌ಪೋರ್ಟ್‌ಗೆ ಆಗಮಿಸುವ ಭಾರತದ ಹೆಚ್ಚುವರಿ ವಿಮಾನಗಳಿಗೆ ಇಂಗ್ಲೆಂಡ್‌ ಸರ್ಕಾರ ನಿರಾಕರಣೆ ಹೇಳಿದೆ. ಅಲ್ಲದೆ, ವಿಮಾನ ಸಂಚಾರಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್‌ನ‌ ಹೌಸ್‌ ಆಫ್ ಕಾಮನ್ಸ್‌, ಭಾರತವನ್ನು ಕೆಂಪು ಪಟ್ಟಿಗೆ ಸೇರಿಸಲು ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿರುವ ಕಾರಣ, ಮುನ್ನೆಚ್ಚರಿಕೆಯಾಗಿ ಈ ಕ್ರಮ ಅನಿವಾರ್ಯ ಜರುಗಿಸಿದೆ.

ಶೇ.30 ವಿಮಾನ ಇಳಿಕೆ: ಭಾರತದಿಂದ ಆಗಮಿಸುವ ವಿಮಾನಗಳ ಸಂಖ್ಯೆ ಶೇ.30 ಕಡಿತಗೊಳಿಸಲು ಆಸ್ಟ್ರೇಲಿಯಾ ನಿರ್ಧರಿಸಿದೆ. ಭಾರತದಂಥ ಹೈ -ರಿಸ್ಕ್ ದೇಶಗಳಿಗೆ ಪ್ರಯಾಣಿಸದಂತೆ ಸೂಚಿಸಿದೆ. ಯುಎಇ ನಿರ್ಬಂಧ: ಭಾರತ ಸೇರಿದಂತೆ 20 ರಾಷ್ಟ್ರಗಳ ವಿಮಾನ ಸಂಚಾರಕ್ಕೆ ಯುಎಇ ನಿರ್ಬಂಧ ವಿಸ್ತರಿಸಿದೆ. ಈಗಾಗಲೇ ಯುಎಇ ಫೆಬ್ರವರಿಯಲ್ಲೇ ಕೆಲವು ರಾಷ್ಟ್ರಗಳ ವಿಮಾನಗಳಿಗೆ ನಿರ್ಬಂಧ ವಿಧಿಸಿತ್ತು. ಮೇ 17ರವರೆಗೆ ಈ ಆದೇಶವಿರಲಿದೆ.

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ -Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago