Featured

ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24

ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24

ಕೆನಡಾ/ಒಟ್ಟಾವಾ: ಭಾರತ ಮತ್ತು ಪಾಕಿಸ್ತಾನದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ 19 ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎರಡು ದೇಶಗಳಿಂದ ಆಗಮಿಸುವ ಎಲ್ಲಾ ನಾಗರಿಕ ವಿಮಾನಯಾನ ಕೆನಡಾ 30 ದಿನಗಳ ಕಾಲ ನಿಷೇಧಿಸಿರುವುದಾಗಿ ಸಾರಿಗೆ ಸಚಿವ ಒಮರ್ ಅಲ್ಘಾಬ್ರಾ ತಿಳಿಸಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದಿಂದ ಕೆನಡಾಕ್ಕೆ ವಿಮಾನದಲ್ಲಿ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕೋವಿಡ್ 19 ಸೋಂಕು ಭಾರೀ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂದಿನ 30 ದಿನಗಳ ಕಾಲ ಎರಡೂ ದೇಶಗಳಿಂದ ಕೆನಡಾಕ್ಕೆ ಆಗಮಿಸುವ ಎಲ್ಲಾ ವಾಣಿಜ್ಯ ಮತ್ತು ಖಾಸಗಿ ನಾಗರಿಕ ವಿಮಾನಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ” ಒಮರ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಭಾರತದಲ್ಲಿ ಕೋವಿಡ್ ಸೋಂಕು ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಈ ಕ್ರಮವನ್ನು ತೆಗೆದುಕೊಂಡಿದ್ದವೆ, ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ನಂತರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಒಮರ್ ತಿಳಿಸಿದ್ದಾರೆ.

ಉಡುಪಿ : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಈ ನಿಷೇಧ ಶುಕ್ರವಾರದಿಂದಲೇ (ಏಪ್ರಿಲ್ 23) ಜಾರಿಯಾಗಲಿದೆ. ಆದರೆ ಈ ನಿರ್ಬಂಧ ಸರಕು ಸಾಗಾಣೆ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದಿರುವ ಒಮರ್, ಲಸಿಕೆ, ರಕ್ಷಣಾ ಉಪಕರಣ ಮತ್ತು ಅಗತ್ಯ ವಸ್ತುಗಳ ಸರಬರಾಜು ನಿರಾತಂಕವಾಗಿ ಮುಂದುವರಿಯಲಿದೆ ಎಂದು ಹೇಳಿದರು.

ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ

ಲಂಡನ್ನಿನ ಹೀಥ್ರೂ ಏರ್‌ಪೋರ್ಟ್‌ಗೆ ಆಗಮಿಸುವ ಭಾರತದ ಹೆಚ್ಚುವರಿ ವಿಮಾನಗಳಿಗೆ ಇಂಗ್ಲೆಂಡ್‌ ಸರ್ಕಾರ ನಿರಾಕರಣೆ ಹೇಳಿದೆ. ಅಲ್ಲದೆ, ವಿಮಾನ ಸಂಚಾರಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್‌ನ‌ ಹೌಸ್‌ ಆಫ್ ಕಾಮನ್ಸ್‌, ಭಾರತವನ್ನು ಕೆಂಪು ಪಟ್ಟಿಗೆ ಸೇರಿಸಲು ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿರುವ ಕಾರಣ, ಮುನ್ನೆಚ್ಚರಿಕೆಯಾಗಿ ಈ ಕ್ರಮ ಅನಿವಾರ್ಯ ಜರುಗಿಸಿದೆ.

ಶೇ.30 ವಿಮಾನ ಇಳಿಕೆ: ಭಾರತದಿಂದ ಆಗಮಿಸುವ ವಿಮಾನಗಳ ಸಂಖ್ಯೆ ಶೇ.30 ಕಡಿತಗೊಳಿಸಲು ಆಸ್ಟ್ರೇಲಿಯಾ ನಿರ್ಧರಿಸಿದೆ. ಭಾರತದಂಥ ಹೈ -ರಿಸ್ಕ್ ದೇಶಗಳಿಗೆ ಪ್ರಯಾಣಿಸದಂತೆ ಸೂಚಿಸಿದೆ. ಯುಎಇ ನಿರ್ಬಂಧ: ಭಾರತ ಸೇರಿದಂತೆ 20 ರಾಷ್ಟ್ರಗಳ ವಿಮಾನ ಸಂಚಾರಕ್ಕೆ ಯುಎಇ ನಿರ್ಬಂಧ ವಿಸ್ತರಿಸಿದೆ. ಈಗಾಗಲೇ ಯುಎಇ ಫೆಬ್ರವರಿಯಲ್ಲೇ ಕೆಲವು ರಾಷ್ಟ್ರಗಳ ವಿಮಾನಗಳಿಗೆ ನಿರ್ಬಂಧ ವಿಧಿಸಿತ್ತು. ಮೇ 17ರವರೆಗೆ ಈ ಆದೇಶವಿರಲಿದೆ.

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ -Vishwanews24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago