ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೊರೋನಾ ಮಾರ್ಗಸೂಚಿಯ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಮುಂದಿನ ಆದೇಶದ ವರೆಗೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.
ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದ್ದು, ಇಂತಹ ಸಂದರ್ಭಗಳಲ್ಲಿ ಕೊವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಸಂಘಟಕರ ಹಾಗೂ ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ.
ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಸುವ ಸಾಂಸ್ಕೃತಿಕ ಚಟುವಟಿಕೆ, ಹಬ್ಬ ಮತ್ತು ಸಮಾರಂಭಗಳನ್ನು 2022 ಜನವರಿ 15 ರ ವರೆಗೆ ಮುಂದೂಡಬೇಕು. ಶಾಲೆ, ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ -19 ಲಸಿಕೆಯನ್ನು ಪಡೆದಿರಬೇಕು. ಎರಡು ಡೋಸ್ ಕೊರೋನಾ ಲಸಿಕೆ ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಮಾಲ್, ಚಿತ್ರ ಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು.
ಈ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…