Featured

ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ :  ಪ್ರಧಾನಿ ಮೋದಿ -Vishwanews24

ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

ನವದೆಹಲಿ: ಕೋವಿಡ್ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ(ಮಾರ್ಚ್ 17) ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ

ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಎಂಗಳ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು. ಮಾಸ್ಕ್ ಕಡ್ಡಾಯ ಮಾಡಬೇಕು. ಅಲ್ಲದೆ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಜನರು ಮಾಸ್ಕ್ ಧರಿಸುವುದನ್ನ ಗಂಭೀರವಾಗಿ ಪರಿಗಣಿಸಿಲ್ಲ. ಇದು ಸ್ಥಳೀಯ ಜಿಲ್ಲಾಡಳಿತದ ವೈಫಲ್ಯವಾಗಿದೆ. ಕೆಲವೆಡೆ ಕೊರೊನಾ 2ನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ.96 ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ಮೈಕ್ರೋ ಕಂಟೈನ್ಮೆಂಟ್ ಆಗತ್ಯವಾಗಿದ್ದು, ಹಳ್ಳಿಗಳಿಗೆ ಸೋಂಕು ವ್ಯಾಪಿಸಿದ್ರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಟೆಸ್ಟಿಂಗ್ ಹೆಚ್ಚಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಸೋಂಕಿತ ವ್ಯಕ್ತಿಯನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕು. ಆರ್‍ ಟಿಪಿಸಿಆರ್ ಶೇ.70ರಷ್ಟು ಹೆಚ್ಚಿಸಬೇಕು. ಕೆಲವು ರಾಜ್ಯಗಳು ಆಂಟಿಜನ್ ಗೆ ಮಾತ್ರ ಆದ್ಯತೆ ನೀಡಿದೆ. ಹೀಗಾಗಿ ಆರ್‍ಟಿಪಿಸಿಆರ್ ಗೆ ಆದ್ಯತೆ ನೀಡಬೇಕು. ನಗರಗಳಿಗೆ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಮೊದಲು ಟಿ1 ನಗರಗಳಲ್ಲಿ ಹೆಚ್ಚಿತ್ತು. ಹೀಗಾಗಿ ಸಣ್ಣ ಊರುಗಳಲ್ಲಿ ಪರೀಕ್ಷೆ ಹೆಚ್ಚು ಮಾಡಬೇಕು. ಟೆಸ್ಟಿಂಗ್ ಹೆಚ್ಚಿಸದಿದ್ದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ. ವ್ಯಾಕ್ಸಿನ್‍ಗಳು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ ಎಂದರು.

ವ್ಯಾಕ್ಸಿನ್ ವೇಸ್ಟ್ ಟಾರ್ಗೆಟ್ ಹಾಕಿಕೊಳ್ಳಬೇಕು. ಕೊರೊನಾ ಚಿಕಿತ್ಸೆ ಬಳಿಕವೂ ನಾವು ಕೊರೊನಾ ಬಗ್ಗೆ ಜಾಗೃತರಾಗಿರಬೇಕು. ಜಿನೊಮ್ ಟೆಸ್ಟಿಂಗ್ ಗಳನ್ನು ನಡೆಸಬೇಕು. ಇದರಿಂದ ವೈರಸ್ ರೂಪಾಂತರಿವಾಗಿರುವ ಬಗ್ಗೆ ಮಾಹಿತಿ ಸಿಗಲಿದೆ. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ. ವ್ಯಾಕ್ಸಿನ್ ವ್ಯರ್ಥ ವಾಗಲು ಬಿಡಬಾರದು. ರಾಜ್ಯ ಸರ್ಕಾರ ಇದನ್ನು ಟ್ರ್ಯಾಕ್ ಮಾಡಬೇಕು ಎಮದು ಮೋದಿ ಕರೆ ನೀಡಿದರು.

ಇದನ್ನೂ ಓದಿ : ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

22 minutes ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

31 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

23 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago