Featured

ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ :  ಪ್ರಧಾನಿ ಮೋದಿ -Vishwanews24

ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

ನವದೆಹಲಿ: ಕೋವಿಡ್ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ(ಮಾರ್ಚ್ 17) ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ

ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಎಂಗಳ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು. ಮಾಸ್ಕ್ ಕಡ್ಡಾಯ ಮಾಡಬೇಕು. ಅಲ್ಲದೆ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಜನರು ಮಾಸ್ಕ್ ಧರಿಸುವುದನ್ನ ಗಂಭೀರವಾಗಿ ಪರಿಗಣಿಸಿಲ್ಲ. ಇದು ಸ್ಥಳೀಯ ಜಿಲ್ಲಾಡಳಿತದ ವೈಫಲ್ಯವಾಗಿದೆ. ಕೆಲವೆಡೆ ಕೊರೊನಾ 2ನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ.96 ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ಮೈಕ್ರೋ ಕಂಟೈನ್ಮೆಂಟ್ ಆಗತ್ಯವಾಗಿದ್ದು, ಹಳ್ಳಿಗಳಿಗೆ ಸೋಂಕು ವ್ಯಾಪಿಸಿದ್ರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಟೆಸ್ಟಿಂಗ್ ಹೆಚ್ಚಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಸೋಂಕಿತ ವ್ಯಕ್ತಿಯನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕು. ಆರ್‍ ಟಿಪಿಸಿಆರ್ ಶೇ.70ರಷ್ಟು ಹೆಚ್ಚಿಸಬೇಕು. ಕೆಲವು ರಾಜ್ಯಗಳು ಆಂಟಿಜನ್ ಗೆ ಮಾತ್ರ ಆದ್ಯತೆ ನೀಡಿದೆ. ಹೀಗಾಗಿ ಆರ್‍ಟಿಪಿಸಿಆರ್ ಗೆ ಆದ್ಯತೆ ನೀಡಬೇಕು. ನಗರಗಳಿಗೆ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಮೊದಲು ಟಿ1 ನಗರಗಳಲ್ಲಿ ಹೆಚ್ಚಿತ್ತು. ಹೀಗಾಗಿ ಸಣ್ಣ ಊರುಗಳಲ್ಲಿ ಪರೀಕ್ಷೆ ಹೆಚ್ಚು ಮಾಡಬೇಕು. ಟೆಸ್ಟಿಂಗ್ ಹೆಚ್ಚಿಸದಿದ್ದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ. ವ್ಯಾಕ್ಸಿನ್‍ಗಳು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ ಎಂದರು.

ವ್ಯಾಕ್ಸಿನ್ ವೇಸ್ಟ್ ಟಾರ್ಗೆಟ್ ಹಾಕಿಕೊಳ್ಳಬೇಕು. ಕೊರೊನಾ ಚಿಕಿತ್ಸೆ ಬಳಿಕವೂ ನಾವು ಕೊರೊನಾ ಬಗ್ಗೆ ಜಾಗೃತರಾಗಿರಬೇಕು. ಜಿನೊಮ್ ಟೆಸ್ಟಿಂಗ್ ಗಳನ್ನು ನಡೆಸಬೇಕು. ಇದರಿಂದ ವೈರಸ್ ರೂಪಾಂತರಿವಾಗಿರುವ ಬಗ್ಗೆ ಮಾಹಿತಿ ಸಿಗಲಿದೆ. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ. ವ್ಯಾಕ್ಸಿನ್ ವ್ಯರ್ಥ ವಾಗಲು ಬಿಡಬಾರದು. ರಾಜ್ಯ ಸರ್ಕಾರ ಇದನ್ನು ಟ್ರ್ಯಾಕ್ ಮಾಡಬೇಕು ಎಮದು ಮೋದಿ ಕರೆ ನೀಡಿದರು.

ಇದನ್ನೂ ಓದಿ : ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago