ಮಂಡ್ಯ: ಕೌಟುಂಬಿಕ ಕಲಹಕ್ಕೆ 2ರ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.
ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಮೃತ ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಎರಡು ವರ್ಷದ ಮಗುವಿತ್ತು. ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಇಂದು (ಮಾ.9) ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.
ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಬದುಕುಳಿದಿದೆ. ಈವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…