ಬೆಂಗಳೂರು: ಹಣಕಾಸು, ಕೌಟುಂಬಿಕ ವಿಷಯಕ್ಕೆ ಪದೇ ಪದೇ ಪತಿ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತ ಪತ್ನಿಯೊಬ್ಬಳು ಮಗು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಗಳರಪಾಳ್ಯದ ಬಾಲಾಜಿನಗರದಲ್ಲಿ ಮಂಗಳವಾರ ನಡೆದಿದೆ.
ತಿಗಳರಪಾಳ್ಯದ ಒಂದು ವರ್ಷ ಎಂಟು ತಿಂಗಳ ಪುತ್ರಿ ಚಾರ್ವಿ ಮೃತ ದುರ್ದೈವಿ. ವಿಷ ಸೇವಿಸಿದ್ದ ಚಂದ್ರಿಕಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮನೆಯಲ್ಲಿ ಪತಿ ಕೆಲಸಕ್ಕೆ ತೆರಳಿದ ಬಳಿಕ ಮಗುವಿಗೆ ಕೀಟನಾಶಕ ಬೆರೆಸಿದ ಚಹಾ ಕುಡಿಸಿ ಬಳಿಕ ತಾನೂ ಸಹ ಸೇವಿಸಿದ್ದಾಳೆ. ನಂತರ ತನ್ನ ಗಂಡನಿಗೆ ಆತ್ಮಹತ್ಯೆ ವಿಷಯವನ್ನು ಚಂದ್ರಿಕಾ ತಿಳಿಸಿದ್ದಾಳೆ.
ತಕ್ಷಣ ಆತಂಕದಿಂದ ಮನೆಗೆ ಧಾವಿಸಿದ ಮಹಿಳೆಯ ಪತಿ, ವಿಷ ಸೇವಿಸಿದ್ದ ಪತ್ನಿ ಹಾಗೂ ಮಗುವನ್ನು ಮಲ್ಲೇಶ್ವರ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಹಾಗೂ ಚಂದ್ರಿಕಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ, ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ. ಚಂದ್ರಿಕಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…