ಉಡುಪಿ, : ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿ ಅನಮಯ ಯೋಗೇಶ್ ದಿವಾಕರ್ ಅವರು ಜನಪ್ರಿಯ ಕೌನ್ ಬನೇಗಾ ಕರೋಡ್ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದಿದ್ದಾನೆ.
ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿ.ವಿ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್ಪತಿ’ಯ ವಿದ್ಯಾರ್ಥಿ ವಿಶೇಷ ಸಂಚಿಕೆಯಲ್ಲಿ ಉಡುಪಿಯ ವಿದ್ಯಾರ್ಥಿ ಅನಮಯ ಪಾಲ್ಗೊಂಡಿದ್ದನು.
ಅವಿಸ್ಮರಣೀಯ 2020: ಕೃಷ್ಣನಗರಿ ಉಡುಪಿಗೆ ಸಿಹಿ-ಕಹಿ ದೇಶದ ಎಂಟು ವಿದ್ಯಾರ್ಥಿಗಳು ಮಾತ್ರ ಈ ಕೌನ್ ಬನೇಗಾ ಕರೋಡ್ಪತಿ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದರು. ಹಾಟ್ ಸೀಟ್ ನಲ್ಲಿ ಅಮಿತಾಬ್ ಬಚ್ಚನ್ ಕೇಳುವ 15 ಪ್ರಶ್ನೆಗಳ ಪೈಕಿ ಅನಮಯ 14 ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಮೂಲಕ ಈ ಸಾಧನೆ ಮಾಡಿದ್ದಾನೆ.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದರೆ ಒಂದು ಕೋಟಿ ಗೆಲ್ಲುವ ಅವಕಾಶ ಇದ್ದರೂ, ಖಚಿತ ಉತ್ತರ ಗೊತ್ತಿಲ್ಲದ ಕಾರಣ ಕ್ವಿಝ್ ನಿಂದ ಕ್ವಿಟ್ ಆಗುವ ನಿರ್ಧಾರ ಮಾಡಿದ್ದಾನೆ. ಆದರೂ ರಾಜ್ಯದ ಕರಾವಳಿಯ ಈ ವಿದ್ಯಾರ್ಥಿ ಪೋಷಕರ ಹಾಗೂ ಶಾಲೆಯ ಕೀರ್ತಿ ಪತಾಕೆಯನ್ನು ದೇಶ ಮಟ್ಟದಲ್ಲೂ ಪಸರಿಸಿದ್ದಾನೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…