Featured

ಕೌನ್ ಬನೇಗಾ ಕರೋಡ್‌ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದ ಉಡುಪಿಯ ಅನಮಯ -Vishwanews24

ಕೌನ್ ಬನೇಗಾ ಕರೋಡ್‌ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದ ಉಡುಪಿಯ ಅನಮಯ -Vishwanews24

ಉಡುಪಿ, : ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿ ಅನಮಯ ಯೋಗೇಶ್ ದಿವಾಕರ್ ಅವರು ಜನಪ್ರಿಯ ಕೌನ್ ಬನೇಗಾ ಕರೋಡ್‌ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದಿದ್ದಾನೆ.

ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿ.ವಿ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿ’ಯ ವಿದ್ಯಾರ್ಥಿ ವಿಶೇಷ ಸಂಚಿಕೆಯಲ್ಲಿ ಉಡುಪಿಯ ವಿದ್ಯಾರ್ಥಿ ಅನಮಯ ಪಾಲ್ಗೊಂಡಿದ್ದನು.

ಅವಿಸ್ಮರಣೀಯ 2020: ಕೃಷ್ಣನಗರಿ ಉಡುಪಿಗೆ ಸಿಹಿ-ಕಹಿ ದೇಶದ ಎಂಟು ವಿದ್ಯಾರ್ಥಿಗಳು ಮಾತ್ರ ಈ ಕೌನ್ ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದರು. ಹಾಟ್ ಸೀಟ್ ನಲ್ಲಿ ಅಮಿತಾಬ್ ಬಚ್ಚನ್ ಕೇಳುವ 15 ಪ್ರಶ್ನೆಗಳ ಪೈಕಿ ಅನಮಯ 14 ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಮೂಲಕ ಈ ಸಾಧನೆ ಮಾಡಿದ್ದಾನೆ.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದರೆ ಒಂದು ಕೋಟಿ ಗೆಲ್ಲುವ ಅವಕಾಶ ಇದ್ದರೂ, ಖಚಿತ ಉತ್ತರ ಗೊತ್ತಿಲ್ಲದ ಕಾರಣ ಕ್ವಿಝ್ ನಿಂದ ಕ್ವಿಟ್ ಆಗುವ ನಿರ್ಧಾರ ಮಾಡಿದ್ದಾನೆ. ಆದರೂ ರಾಜ್ಯದ ಕರಾವಳಿಯ ಈ ವಿದ್ಯಾರ್ಥಿ ಪೋಷಕರ ಹಾಗೂ ಶಾಲೆಯ ಕೀರ್ತಿ ಪತಾಕೆಯನ್ನು ದೇಶ ಮಟ್ಟದಲ್ಲೂ ಪಸರಿಸಿದ್ದಾನೆ.

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

7 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

13 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

15 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

15 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

15 hours ago