Featured

ಕೌನ್ ಬನೇಗಾ ಕರೋಡ್ ಪತಿ: 25 ಲಕ್ಷ ರೂ. ಗೆದ್ದ ಉಡುಪಿಯ ರವಿ ಕಟಪಾಡಿ, ಗಳಿಸಿದ ಬಹುಮಾನ ಮೊತ್ತ ಬಡವರ ಸೇವೆಗೆ ಮೀಸಲು -Vishwanews24

ಕೌನ್ ಬನೇಗಾ ಕರೋಡ್ ಪತಿ: 25 ಲಕ್ಷ ರೂ. ಗೆದ್ದ ಉಡುಪಿಯ ರವಿ ಕಟಪಾಡಿ, ಗಳಿಸಿದ ಬಹುಮಾನ ಮೊತ್ತ ಬಡವರ ಸೇವೆಗೆ ಮೀಸಲು

ತುಳುವಿನಲ್ಲಿ ಮಾತನಾಡಿದ ಅಮಿತಾಬ್

ಉಡುಪಿ: ದೈತ್ಯ ವೇಷಗಳನ್ನು ಧರಿಸುವ ಮೂಲಕ 54.5 ಲಕ್ಷ ರೂ. ಗಳನ್ನು ಸಂಗ್ರಹಿಸಿ ಅಸಹಾಯಕ ಮಕ್ಕಳ ಚಿಕಿತ್ಸೆಗಾಗಿ ಭರಿಸಿರುವ ಸಮಾಜ ಸೇವಕ ರವಿ ಕಟಪಾಡಿ ಅವರು ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಗಳಿಸಿದ ಬಹುಮಾನ ಮೊತ್ತವನ್ನು ಕೂಡಾ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.

ಶುಕ್ರವಾರ ರಾತ್ರಿ ಪ್ರಸಾರವಾದ ಮಹಾನ್ ತಾರೆ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೆಬಿಸಿ ಕರ್ಮವೀರ್ ಸ್ಪೆಷಲ್ ಎಪಿಸೋಡ್‌ನಲ್ಲಿ ರವಿ ಕಟಪಾಡಿ ಹಾಗೂ ಅಂಬಾ ಬೆಹಾನ್ ಜಂಟಿಯಾಗಿ 25 ಲಕ್ಷ ರೂ. ಮೊತ್ತವನ್ನು ವಿಜೇತರಾಗಿದ್ದಾರೆ.

ಹಿಂದಿ ಖಾಸಗಿ ವಾಹಿನಿಯ ಈ ಜನಪ್ರಿಯ ಕಾರ್ಯಕ್ರಮದಲ್ಲಿ ಆರಂಭಿಕ 7 ಪ್ರಶ್ನೆಗಳಿಗೆ ರವಿ ಕಟಪಾಡಿ ಮತ್ತು ಮುಂದಿನ ಪ್ರಶ್ನೆಗಳಿಗೆ ಅಂಬಾ ಉತ್ತರಿಸಿದ್ದರು. ಹಿರಿಯ ನಟ ಅನುಪಮ್ ಖೇರ್ ಜತೆಗೂಡಿ ಸಹಕರಿಸಿದರು.

ರವಿ ಕಟಪಾಡಿ ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭ ವಿಭಿನ್ನ ದೈತ್ಯ ವೇಷಗಳ ಮೂಲಕ ಜನರನ್ನು ರಂಜಿಸಿ ನೆರವು ನಿಧಿ ಸಂಗ್ರಹಿಸಿ ಬಡ ಮಕ್ಕಳ ಕಲ್ಯಾಣಕ್ಕಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವಾಕಾರ್ಯ ಗುರುತಿಸಿ ವಾಹಿನಿ ಈ ಅವಕಾಶ ನೀಡಿದೆ.

“ದರಿಯಾ ದಿಲ್ ದಾನವ್”

ದೈತ್ಯ ವೇಷ ಧರಿಸುವ ಮೂಲಕ ಮಕ್ಕಳ ಕಲ್ಯಾಣ ಮಾಡುವ ರವಿ ಕಟಪಾಡಿಯವರಿಗೆ ತಾನು “ದರಿಯಾ ದಿಲ್ ದಾನವ್” ಎಂದು ಬಿರುದು ನೀಡುವುದಾಗಿ ಅಮಿತಾಬ್ ಘೋಷಿಸಿದರು

ಉಡುಪಿ ಮತ್ತು ಕುಡ್ಲದ ಎಲ್ಲಾ ಜನರಿಗೂ ನನ್ನ ನಮಸ್ಕಾರ ಎಂದು ರವಿ ಕಟಪಾಡಿ ಹೇಳಿಕೊಟ್ಟಂತೆ ಅಮಿತಾಬ್ ಬಚ್ಚನ್ ತುಳುವಿನಲ್ಲಿ ಅದನ್ನು ಉಚ್ಚರಿಸಿದರು.

http://ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಿನ್ನೆಲೆ ಕ್ಷೇತ್ರಕ್ಕೆ ಆಗಮಿಸಿದ ಸಚಿವರಾದ ಜೆ.ಸಿ.ಮಾಧುಸ್ವಾಮಿ -Vishwanews24

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

19 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

19 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

20 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

20 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

20 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

20 hours ago