ಉಡುಪಿ: ದೈತ್ಯ ವೇಷಗಳನ್ನು ಧರಿಸುವ ಮೂಲಕ 54.5 ಲಕ್ಷ ರೂ. ಗಳನ್ನು ಸಂಗ್ರಹಿಸಿ ಅಸಹಾಯಕ ಮಕ್ಕಳ ಚಿಕಿತ್ಸೆಗಾಗಿ ಭರಿಸಿರುವ ಸಮಾಜ ಸೇವಕ ರವಿ ಕಟಪಾಡಿ ಅವರು ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಗಳಿಸಿದ ಬಹುಮಾನ ಮೊತ್ತವನ್ನು ಕೂಡಾ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಮಹಾನ್ ತಾರೆ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೆಬಿಸಿ ಕರ್ಮವೀರ್ ಸ್ಪೆಷಲ್ ಎಪಿಸೋಡ್ನಲ್ಲಿ ರವಿ ಕಟಪಾಡಿ ಹಾಗೂ ಅಂಬಾ ಬೆಹಾನ್ ಜಂಟಿಯಾಗಿ 25 ಲಕ್ಷ ರೂ. ಮೊತ್ತವನ್ನು ವಿಜೇತರಾಗಿದ್ದಾರೆ.
ಹಿಂದಿ ಖಾಸಗಿ ವಾಹಿನಿಯ ಈ ಜನಪ್ರಿಯ ಕಾರ್ಯಕ್ರಮದಲ್ಲಿ ಆರಂಭಿಕ 7 ಪ್ರಶ್ನೆಗಳಿಗೆ ರವಿ ಕಟಪಾಡಿ ಮತ್ತು ಮುಂದಿನ ಪ್ರಶ್ನೆಗಳಿಗೆ ಅಂಬಾ ಉತ್ತರಿಸಿದ್ದರು. ಹಿರಿಯ ನಟ ಅನುಪಮ್ ಖೇರ್ ಜತೆಗೂಡಿ ಸಹಕರಿಸಿದರು.
ರವಿ ಕಟಪಾಡಿ ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭ ವಿಭಿನ್ನ ದೈತ್ಯ ವೇಷಗಳ ಮೂಲಕ ಜನರನ್ನು ರಂಜಿಸಿ ನೆರವು ನಿಧಿ ಸಂಗ್ರಹಿಸಿ ಬಡ ಮಕ್ಕಳ ಕಲ್ಯಾಣಕ್ಕಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವಾಕಾರ್ಯ ಗುರುತಿಸಿ ವಾಹಿನಿ ಈ ಅವಕಾಶ ನೀಡಿದೆ.
“ದರಿಯಾ ದಿಲ್ ದಾನವ್”
ದೈತ್ಯ ವೇಷ ಧರಿಸುವ ಮೂಲಕ ಮಕ್ಕಳ ಕಲ್ಯಾಣ ಮಾಡುವ ರವಿ ಕಟಪಾಡಿಯವರಿಗೆ ತಾನು “ದರಿಯಾ ದಿಲ್ ದಾನವ್” ಎಂದು ಬಿರುದು ನೀಡುವುದಾಗಿ ಅಮಿತಾಬ್ ಘೋಷಿಸಿದರು
ಉಡುಪಿ ಮತ್ತು ಕುಡ್ಲದ ಎಲ್ಲಾ ಜನರಿಗೂ ನನ್ನ ನಮಸ್ಕಾರ ಎಂದು ರವಿ ಕಟಪಾಡಿ ಹೇಳಿಕೊಟ್ಟಂತೆ ಅಮಿತಾಬ್ ಬಚ್ಚನ್ ತುಳುವಿನಲ್ಲಿ ಅದನ್ನು ಉಚ್ಚರಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…