Featured

ಕೌನ್ ಬನೇಗಾ ಕರೋಡ್ ಪತಿ: 25 ಲಕ್ಷ ರೂ. ಗೆದ್ದ ಉಡುಪಿಯ ರವಿ ಕಟಪಾಡಿ, ಗಳಿಸಿದ ಬಹುಮಾನ ಮೊತ್ತ ಬಡವರ ಸೇವೆಗೆ ಮೀಸಲು -Vishwanews24

ಕೌನ್ ಬನೇಗಾ ಕರೋಡ್ ಪತಿ: 25 ಲಕ್ಷ ರೂ. ಗೆದ್ದ ಉಡುಪಿಯ ರವಿ ಕಟಪಾಡಿ, ಗಳಿಸಿದ ಬಹುಮಾನ ಮೊತ್ತ ಬಡವರ ಸೇವೆಗೆ ಮೀಸಲು

ತುಳುವಿನಲ್ಲಿ ಮಾತನಾಡಿದ ಅಮಿತಾಬ್

ಉಡುಪಿ: ದೈತ್ಯ ವೇಷಗಳನ್ನು ಧರಿಸುವ ಮೂಲಕ 54.5 ಲಕ್ಷ ರೂ. ಗಳನ್ನು ಸಂಗ್ರಹಿಸಿ ಅಸಹಾಯಕ ಮಕ್ಕಳ ಚಿಕಿತ್ಸೆಗಾಗಿ ಭರಿಸಿರುವ ಸಮಾಜ ಸೇವಕ ರವಿ ಕಟಪಾಡಿ ಅವರು ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಗಳಿಸಿದ ಬಹುಮಾನ ಮೊತ್ತವನ್ನು ಕೂಡಾ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.

ಶುಕ್ರವಾರ ರಾತ್ರಿ ಪ್ರಸಾರವಾದ ಮಹಾನ್ ತಾರೆ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೆಬಿಸಿ ಕರ್ಮವೀರ್ ಸ್ಪೆಷಲ್ ಎಪಿಸೋಡ್‌ನಲ್ಲಿ ರವಿ ಕಟಪಾಡಿ ಹಾಗೂ ಅಂಬಾ ಬೆಹಾನ್ ಜಂಟಿಯಾಗಿ 25 ಲಕ್ಷ ರೂ. ಮೊತ್ತವನ್ನು ವಿಜೇತರಾಗಿದ್ದಾರೆ.

ಹಿಂದಿ ಖಾಸಗಿ ವಾಹಿನಿಯ ಈ ಜನಪ್ರಿಯ ಕಾರ್ಯಕ್ರಮದಲ್ಲಿ ಆರಂಭಿಕ 7 ಪ್ರಶ್ನೆಗಳಿಗೆ ರವಿ ಕಟಪಾಡಿ ಮತ್ತು ಮುಂದಿನ ಪ್ರಶ್ನೆಗಳಿಗೆ ಅಂಬಾ ಉತ್ತರಿಸಿದ್ದರು. ಹಿರಿಯ ನಟ ಅನುಪಮ್ ಖೇರ್ ಜತೆಗೂಡಿ ಸಹಕರಿಸಿದರು.

ರವಿ ಕಟಪಾಡಿ ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭ ವಿಭಿನ್ನ ದೈತ್ಯ ವೇಷಗಳ ಮೂಲಕ ಜನರನ್ನು ರಂಜಿಸಿ ನೆರವು ನಿಧಿ ಸಂಗ್ರಹಿಸಿ ಬಡ ಮಕ್ಕಳ ಕಲ್ಯಾಣಕ್ಕಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವಾಕಾರ್ಯ ಗುರುತಿಸಿ ವಾಹಿನಿ ಈ ಅವಕಾಶ ನೀಡಿದೆ.

“ದರಿಯಾ ದಿಲ್ ದಾನವ್”

ದೈತ್ಯ ವೇಷ ಧರಿಸುವ ಮೂಲಕ ಮಕ್ಕಳ ಕಲ್ಯಾಣ ಮಾಡುವ ರವಿ ಕಟಪಾಡಿಯವರಿಗೆ ತಾನು “ದರಿಯಾ ದಿಲ್ ದಾನವ್” ಎಂದು ಬಿರುದು ನೀಡುವುದಾಗಿ ಅಮಿತಾಬ್ ಘೋಷಿಸಿದರು

ಉಡುಪಿ ಮತ್ತು ಕುಡ್ಲದ ಎಲ್ಲಾ ಜನರಿಗೂ ನನ್ನ ನಮಸ್ಕಾರ ಎಂದು ರವಿ ಕಟಪಾಡಿ ಹೇಳಿಕೊಟ್ಟಂತೆ ಅಮಿತಾಬ್ ಬಚ್ಚನ್ ತುಳುವಿನಲ್ಲಿ ಅದನ್ನು ಉಚ್ಚರಿಸಿದರು.

http://ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಿನ್ನೆಲೆ ಕ್ಷೇತ್ರಕ್ಕೆ ಆಗಮಿಸಿದ ಸಚಿವರಾದ ಜೆ.ಸಿ.ಮಾಧುಸ್ವಾಮಿ -Vishwanews24

Vishwa News 24

Recent Posts

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

8 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

20 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

26 minutes ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

47 minutes ago

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…

57 minutes ago

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…

1 hour ago