ಮಂಗಳೂರು:ನಗರದ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಬಿಎಎಲ್ಎಲ್ಬಿ ಕಲಿಯುತ್ತಿರುವ ಪವಿತ್ರಾ ಶೆಟ್ಟಿ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತ ಮಕ್ಕಳ ಮುಖದಲ್ಲಿ ನಗು ಕಾಣುವ ಸಲುವಾಗಿ ದಾನ ಮಾಡಿದ್ದಾಳೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರ್ ನವರಾದ ಪವಿತ್ರಾ ಕಾನೂನು ಪದವಿ ಪಡೆಯುವ ಉದ್ದೇಶದಿಂದ ನಗರಕ್ಕೆ ಆಗಮಿಸಿದ್ದಾರೆ. ಅನಿವಾರ್ಯ ಕಾರಣದಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದ ಪವಿತ್ರಾ ಕಿಮೋಥೆರಪಿಗೆ ಒಳಗಾದ ಮಕ್ಕಳನ್ನು ನೋಡಿ ಕೇಶದಾನ ಮಾಡುವ ನಿರ್ಧಾರ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಪವಿತ್ರಾ ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಕೆಲವು ಹೊತ್ತು ಹೊರಭಾಗದಲ್ಲಿ ಕಾಯುವಂತೆ ತಿಳಿಸಿದರಂತೆ. ಹಾಗೆ ಹೊರಭಾಗದಲ್ಲಿ ಕುಳಿತಿದ್ದಾಗ ಕಿಮೋ ಥೆರಪಿಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಪವಿತ್ರಾ ಅವರನ್ನು ನೋಡಿ ನಿಮ್ಮ ಕೂದಲು ತುಂಬಾ ಚೆನ್ನಾಗಿದೆ ಎಂದು ಮುಟ್ಟಿದ್ದಾಗ ಅವರ ಮುಖದಲ್ಲಿ ಕಂಡ ಅಸಹಾಯಕತೆಯಿಂದ ಬೇಸರಗೊಂಡ ಪವಿತ್ರಾ ಮಕ್ಕಳ ಮುಂದೆ ನಸು ನಗುತ್ತಾ ವೈದ್ಯರನ್ನು ಭೇಟಿಯಾಗಿ ವಾಪಾಸು ಬಂದಿದ್ದರು. ಬಳಿಕ ಕ್ಯಾನ್ಸರ್ ಸೇವಾ ಸಂಸ್ಥೆಯೊಂದನ್ನು ಸಂಪರ್ಕಿಸಿ ಕೇಶದಾನ ಮಾಡುವ ಬಗ್ಗೆ ಚರ್ಚಿಸಿ ಕಳೆದ ವಾರ ತಮ್ಮ 18 ಇಂಚು ಉದ್ದದ ಕೂದಲನ್ನು ದಾನ ಮಾಡಿದ್ದಾರೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…