Featured

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಕೆಜಿಎಫ್​ ಖ್ಯಾತಿಯ ನಟ ಹರೀಶ್​ ರೈ – Vishwanews24

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಕೆಜಿಎಫ್​ ಖ್ಯಾತಿಯ ನಟ ಹರೀಶ್​ ರೈ ; ಸಹಾಯಕ್ಕೆ ಮನವಿ

ಸ್ಯಾಂಡಲ್ ವುಡ್‌ನ ಖ್ಯಾತ ನಟ, ಕೆಜಿಎಫ್-2 ಸಿನಿಮಾದಲ್ಲಿ ನಟಿಸಿದ್ದಿದ್ದ ಹರೀಶ್​ ರೈ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚಿಗೆ ಪರೀಕ್ಷೆ ಮಾಡಿಸಿದ ಹರೀಶ್ ರೈ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ.

ಸ್ಯಾಂಡಲ್ ವುಡ್‌ನ ಖ್ಯಾತ ನಟ, ಕೆಜಿಎಫ್-2 ಸಿನಿಮಾದಲ್ಲಿ ನಟಿಸಿದ್ದಿದ್ದ ಹರೀಶ್​ ರೈ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚಿಗೆ ಪರೀಕ್ಷೆ ಮಾಡಿಸಿದ ಹರೀಶ್ ರೈ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ. ಸುಮಾರು ಮೂರು ವರ್ಷದಿಂದ ಅವರು ಅನಾರೋಗ್ಯದಿಂದ ನರಳಾಡುತ್ತಿದ್ದರು. ಆದರೆ ಮಕ್ಕಳು ಚಿಕ್ಕವರು ಹಾಗೂ ‘ಕೆಜಿಎಫ್​ 2’ ಚಿತ್ರದ ಶೂಟಿಂಗ್​ ನಲ್ಲಿದ್ದಕಾರಣ ಚಿಕಿತ್ಸೆ ಪಡೆಯಲು ತಡ ಮಾಡಿದ್ದರಂತೆ. ಹಣದ ಕೊರತೆ ಕೂಡ ಇದ್ದಿದ್ದರಿಂದ ಹರೀಶ್ ರೈ ತೀರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಳಿಕ ವೈದ್ಯರ ಬಳಿ ಹೋಗಿದ ಹರೀಶ್ ರೈ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ. ಕೂಡಲೇ ಆಪರೇಷನ್​ ಸಹ ಮಾಡಿದರು. ಆದರೆ ಆಪರೇಷನ್​ ನಂತರ ಕೂಡ ಒಂದಿಷ್ಟು ಸಮಸ್ಯೆಗಳು ಎದುರಾಗಿದ್ದು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ಅನೇಕರು ಮಾತನಾಡಿ ಹಣದ ಸಹಾಯ ಮಾಡುವಂತೆ ಹೇಳಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹರೀಶ್ ರಾಯ್ ಅವರಿಗೆ ಹೆಲ್ಪ್ ಮಾಡಿ ಮೊಬೈಲ್ ನಂಬರ್ ಸಹ ಹಾಕಿದ್ದರು. ಇದೀಗ ಹರೀಶ್​ ರೈ ಅವರೇ ಯೂ​ಟ್ಯೂಬ್​ ಚಾನೆಲ್​ ಒಂದರಲ್ಲಿ ಮಾತನಾಡಿದ್ದಾರೆ.

ನಾನು ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ , ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ : ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ – Vishwanews24

ಅನಾರೋಗ್ಯದ ಬಗ್ಗೆ ಮಾತನಾಡಿದ ಹರೀಶ್ ರೈ ‘ವೈದ್ಯರು ನಾಲ್ಕನೇ ಸ್ಟೇಜ್​ ಎಂದರು. ಇನ್ನು ನನಗೆ ಎಷ್ಟು ಟೈಮ್​ ಉಳಿದಿದೆ ಅಂತ ಕೇಳಿದೆ. ಮೂರು ವರ್ಷ ಹೆದರಬೇಡಿ ಅಂತ ಡಾಕ್ಟರ್​ ಹೇಳಿದ್ರು. ರೇಡಿಯೋ ಥೆರಪಿ ವರ್ಕ್​ ಆಗದ ಕಾರಣ ಬೇರೆ ಮಾತ್ರೆ ನೀಡುತ್ತಿದ್ದಾರೆ. ಆ ಮಾತ್ರೆಗಳಿಗೆ ಖರ್ಚು ಜಾಸ್ತಿ. ತಿಂಗಳಿಗೆ 3.5 ಲಕ್ಷ ಖರ್ಚಾಗಬಹುದು. 8-10 ತಿಂಗಳು ಮಾತ್ರೆ ತೆಗೆದುಕೊಳ್ಳಬೇಕು ಅಂತ ವೈದ್ಯರು ಹೇಳಿದ್ದಾರೆ’ ಎಂದು ಹರೀಶ್​ ರೈ ಕಷ್ಟದ ಸ್ಥಿತಿ ಬಿಚ್ಚಿಟ್ಟಿದ್ದಾರೆ.

ಹಣದ ಅವಶ್ಯಕತೆ ತುಂಬಾ ಇದೆ ಎಂದು ಹರೀಶ್​ ರೈ ಹೇಳಿದ್ದಾರೆ. ಫ್ಯಾಮಿಲಿ ಯಾರೂ ಬರಲ್ಲ. ಕಷ್ಟದಲ್ಲಿ ಅವರು ಸಹಾಯಕೂಡ ಮಾಡಲ್ಲ. ಜನರು ಬರುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು. ಸದ್ಯ ಹರೀಶ್ ರೈ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ‘ಕೆಜಿಎಫ್​ 2 ಸಿನಿಮಾ ಶೂಟಿಂಗ್​ ಸಂದರ್ಭದಲ್ಲೂ ನನಗೆ ಗಂಟಲಲ್ಲಿ ಗಡ್ಡೆ ಇತ್ತು. ಆದರೂ ಕೂಡ ನಾನು ಶೂಟಿಂಗ್​ ಮಾಡಿದೆ. ಫೈಟಿಂಗ್​ ಸೀನ್​ ಸಹ ಮಾಡಿದೆ. ಗಡ್ಡೆ ಯಾರಿಗೂ ಕಾಣಿಸುತ್ತಿರಲಿಲ್ಲ. ನಾನು ಯಾರಿಗೂ ಹೇಳಲಿಲ್ಲ. ನಾನೇ ಮುಚ್ಚುಮರೆ ಮಾಡಿದೆ’ ಎಂದು ಹರೀಶ್​ ರೈ ಹೇಳಿದ್ದಾರೆ. ಒಂದು ವೇಳೆ ಈ ಸಮಸ್ಯೆ ಗೊತ್ತಾದರೆ ಆಫರ್ ಬರುವುದಿಲ್ಲ ಅಂತ ಭಯ ಆಯ್ತು. ಹಾಗಾಗಿ ಕೆಜಿಎಫ್-2 ಚಿತ್ರ ರಿಲೀಸ್ ಆದ ಬಳಿಕ ನಾನು ಸಂದರ್ಶನ ಕೂಡ ಕೊಟ್ಟಿಲ್ಲ. ಅವರೆಲ್ಲಾ ತಪ್ಪು ತಿಳಿದುಕಂಡಿದ್ದಾರಾ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇನ್ನು ಕೆಲವರು ಸಹಾಯ ಮಾಡಿದ್ದಾರೆ ಅಂತ ಬಹಿರಂಗ ಪಡಿಸಿದ್ದಾರೆ.

ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಈಗ ಕನ್ನಡ ಚಿತ್ರರಂಗದ ಕೆಲವು ಸ್ಟಾರ್​ ಕಲಾವಿದರು ಅವರ ಸಹಾಯಕ್ಕೆ ಧಾವಿಸಿದ್ದಾರೆ. ಹೆಸರು ಹೇಳಲು ಇಷ್ಟಪದೆ ಚಿಕಿತ್ಸೆಗೆ ಬೇಕಾಗುವ ಹಣವನ್ನು ನೀಡಲು ಕನ್ನಡದ ಹೀರೋ ಒಬ್ಬರು ಮುಂದೆ ಬಂದಿದ್ದಾರೆ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹರೀಶ್​ ರೈ ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

15 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

18 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

18 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

18 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

18 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

18 hours ago