ಭೋಪಾಲ್, : ಇಂಡಿಯಾ ಟುಡೇ ಜತೆ ಮಾತನಾಡುತ್ತಾ, ಗೋಮೂತ್ರ ಹಾಗೂ ಇನ್ನಿತರ ಗೋ ಉತ್ಪನ್ನಗಳ ಬಳಕೆಯಿಂದ ನನ್ನ ಸ್ತನ ಕ್ಯಾನ್ಸರ್ ಸಂಪೂರ್ಣ ಗುಣಮುಖವಾದೆ ಎಂದು ಆರೋಪಿ ಪ್ರಜ್ಙಾ ಸಿಂಗ್ ಠಾಕೂರ್ ಹೇಳಿದ್ದಾರೆ..
ಗೋವುಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗೋವುಗಳನ್ನು ಅನೇಕ ಕಡೆಗಳಲ್ಲಿ ನೋಡಿಕೊಳ್ಳುವ ರೀತಿಯಿಂದ ಮನಸಿಗೆ ಹಿಂಸೆಯಾಗುತ್ತದೆ. ಗೋದಾನ ಅಮೃತಕ್ಕೆ ಸಮಾನ ಎಂದರು. ಗೋ ಉತ್ಪನ್ನಗಳನ್ನು ಬಳಕೆ ಮಾಡುವುದರಿಂದ ಅನೇಕ ಆರೋಗ್ಯ ಲಾಭಗಳನ್ನು ಪಡೆಯಬಹುದು. ಕ್ಯಾನ್ಸರ್ ಗುಣಪಡಿಸಲು ಗೋಮೂತ್ರ ಸಹಕಾರಿ ಎಂದು ಹೇಳಿದರು.
ಗೋಮೂತ್ರ ಹಾಗೂ ಪಂಚಗವ್ಯ ಜೊತೆಗೆ ಆಯುರ್ವೇದ ಗಿಡಮೂಲಿಕೆಗಳನ್ನು ಬಳಸಿಕೊಂಡು ನನ್ನ ಕ್ಯಾನ್ಸರ್ ಗುಣಪಡಿಸಿಕೊಂಡೆ ಎಂದು ಪುನರುಚ್ಚರಿಸಿದರು. ಗೋಮಾತೆಯನ್ನು ಹಿಂಬದಿಯಿಂದ ಮುಂಬದಿಯ ತನಕ ಸವರಿದರೆ ರಕ್ತದೊತ್ತಡ ಕಡಿಮೆಯಾಗುತ್ತದೆ.ಗೋಮೂತ್ರವು ಅಮೃತವಾಗಿದೆ. ಗೋಶಾಲೆಯು ತಪಸ್ಸಿಗೆ ಉತ್ತಮ ಸ್ಥಳವಾಗಿದೆ ಎದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…