ಬೆಂಗಳೂರು: ಸ್ಯಾಂಡಲ್ವುಡ್ ನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತನ್ನ ಕೂದಲನ್ನು ದಾನ ಮಾಡಿದ್ದಾರೆ.
ಧ್ರುವ ಅವರು ‘ಪೊಗರು’ ಚಿತ್ರಕ್ಕಾಗಿ ಕಳೆದ 2 ವರ್ಷದಿಂದ ಕೂದಲು ಬಿಟ್ಟಿದ್ದರು. ಇದೀಗ ಅವರ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಬಿದ್ದಿದೆ. ಸಿನಿಮಾ ಕಂಪ್ಲೀಟ್ ಆದ ಹಿನ್ನೆಲೆಯಲ್ಲಿ ಧ್ರುವ ಅವರು ಹೇರ್ ಕಟ್ ಮಾಡಿಸಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಈ ಕೂದಲು ಕೊಡೋದಾಗಿ ಧ್ರುವ ಹೇಳಿದ್ದಾರೆ.
ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.
ಈ ಹಿಂದೆ ಚಿತ್ರ ಬಿಡುಗಡೆಯ ಬಗ್ಗೆ ಮಾತನಾಡಿದ್ದ ನಂದಕಿಶೋರ್, ‘ಪೊಗರು’ ಚಿತ್ರವನ್ನು ಡಿಸೆಂಬರ್ 25ರ ಕ್ರಿಸ್ಮಸ್ ಹಬ್ಬದಂದು ಅಥವಾ ಜನವರಿ ತಿಂಗಳ ಸಂಕ್ರಾಂತಿ ಹಬ್ಬದಂದು ರಿಲೀಸ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕೂದಲು, ಗಡ್ಡ ಬಿಟ್ಟುಕೊಂಡು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…