ನವದೆಹಲಿ: ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳನ್ನು ಗುಣಪಡಿಸಲು ಬಳಸುತ್ತಿರುವುದು ಗೋಮೂತ್ರದಿಂದ ತಯಾರಿಸಿದ ಔಷಧಿಯಾಗಿದೆ. ಹಾಗಾಗಿ ಭಾರತ ಸರ್ಕಾರವು ಹಸುಗಳ ಸಂರಕ್ಷಣೆಗಾಗಿ ಹೊಸ ಯೋಜನೆ ಸಿದ್ಧಪಡಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಅಶ್ವಿನಿ ಚೌಬೆ ಹೇಳಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಗೋಮೂತ್ರದಿಂದ ಹಲವಾರು ಔಷಧಿಗಳು ತಯಾರಾಗುತ್ತಿವೆ. ಕ್ಯಾನ್ಸರ್ ರೋಗವನ್ನು ಗುಣಪಡಿಸಲು ಬಳಸುವ ಔಷಧಿಯೂ ಗೋಮೂತ್ರದಿಂದಲೇ ತಯಾರಿಸಿದ್ದು. ದೇಸೀ ಗೋವುಗಳ ರಕ್ಷಣೆಗಾಗಿ ಸರ್ಕಾರ ಯೋಜನೆ ಸಿದ್ದಪಡಿಸಿದೆ. ಈ ಬಗ್ಗೆ ಆಯುಷ್ ಸಚಿವಾಲಯ ಕಾರ್ಯ ಪ್ರವೃತ್ತವಾಗಿದೆ ಎಂದಿದ್ದಾರೆ.
ಕೃತಕ ಗರ್ಭಧಾರಣೆ ಮೂಲಕ ಹಸುಗಳ ಜನನ ಪ್ರಮಾಣ ಹೆಚ್ಚಿಸುವ ಬಗ್ಗೆ ಪಶುಸಂಗೋಪನ ವಿಭಾಗ ಕಾರ್ಯವೆಸಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗುರುವಾರ ಹೇಳಿದ್ದರು. ಇದರಿಂದಾಗಿ ಗುಂಪುಹಲ್ಲೆ ಕೃತ್ಯಗಳಿಗೆ ಕಡಿವಾಣ ಹಾಕಬಹುದು ಎಂದ ಸಚಿವರು ಪ್ರಾಥಮಿಕ ಹಂತದಲ್ಲಿ 30 ಲಕ್ಷ ಡೋಸ್ ಔಷಧಿಗಳನ್ನು ತಯಾರಿಸುವ ಗುರಿ ಕೇಂದ್ರ ಸರ್ಕಾರದ್ದು ಎಂದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…