Featured

ಕ್ರಿಕೆಟ್‌ ಬದುಕಿಗೆ ವಿದಾಯ ಘೋಷಿಸಿದ ಗೌತಮ್ ಗಂಭೀರ್..

ಹೊಸದಿಲ್ಲಿ, : ಭಾರತ ಕ್ರಿಕೆಟಿಗ ಹಾಗೂ 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಗೌತಮ್ ಗಂಭೀರ್ ಮಂಗಳವಾರ ದಿಢೀರನೇ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದಾರೆ.

1999 ರಲ್ಲಿ ಮೊದಲ ದರ್ಜೆ ಕ್ರಿಕೆಟಿಗೆ ಪಾದಾರ್ಪಣೆ ಮಾಡುವ ಮೂಲಕ ತಮ್ಮ ಕ್ರಿಕೆಟ್ ಪಯಣ ಆರಂಭಿಸಿದ್ದ ಗೌತಮ್ ಗಂಭೀರ್, ಹಲವು ಸಂದರ್ಭಗಳಲ್ಲಿ ತಂಡದ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದ್ದರು.

2007ರ ಟ್ವೆಂಟಿ-20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಪರ ಗರಿಷ್ಠ ಸ್ಕೋರ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಗಂಭೀರ್ ಎರಡು ದಶಕಗಳ ವೃತ್ತಿಜೀವನದಲ್ಲಿ 10,000ಕ್ಕೂ ಅಧಿಕ ಅಂತರ್‌ರಾಷ್ಟ್ರೀಯ ರನ್ ಗಳಿಸಿದ್ದಾರೆ. 2003ರಲ್ಲಿ ಏಕದಿನ ಕ್ರಿಕೆಟ್, 2004ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟಿರುವ ಗಂಭೀರ್ 58 ಟೆಸ್ಟ್‌ನಲ್ಲಿ 4,154 ರನ್, 147 ಏಕದಿನದಲ್ಲಿ 5,238 ರನ್ ಹಾಗೂ 37 ಟಿ-20ಯಲ್ಲಿ 932 ರನ್ ಕಲೆ ಹಾಕಿದ್ದಾರೆ.

ಈ ಬಗ್ಗೆ ಇಂದು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ವೀಡಿಯೊ ಮಾಡಿದ್ದು, ಇದನ್ನು ತಮ್ಮ ಟ್ವಿಟರ್‌ನಲ್ಲೂ ಹಾಕಿಕೊಂಡಿದ್ದಾರೆ. ”ಭಾರವಾದ ಹೃದಯದಿಂದ ನನ್ನ ಜೀವನದುದ್ದಕ್ಕೂ ಹೆದರುತ್ತಿದ್ದ ಈ ನಿರ್ಧಾರವನ್ನು ಘೋಷಿಸುತ್ತಿದ್ದೇನೆ” ಎಂದು ಭಾವನಾತ್ಮಕ ಟ್ವೀಟ್‌ ಅನ್ನು ಸಹ ಗಂಭೀರ್ ಮಾಡಿದ್ದಾರೆ.

ಎಡಗೈ ಆರಂಭಿಕ ದಾಂಡಿಗ ಗಂಭೀರ್ 2016ರ ನವೆಂಬರ್‌ನಲ್ಲಿ ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿ ಭಾರತವನ್ನು ಪ್ರತಿನಿಧಿಸಿದ್ದರು.

vishwanews24

 

 

 

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

42 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

50 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago