Featured

ಕ್ರಿಕೆಟ್‌ ಬದುಕಿಗೆ ವಿದಾಯ ಘೋಷಿಸಿದ ಗೌತಮ್ ಗಂಭೀರ್..

ಹೊಸದಿಲ್ಲಿ, : ಭಾರತ ಕ್ರಿಕೆಟಿಗ ಹಾಗೂ 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಗೌತಮ್ ಗಂಭೀರ್ ಮಂಗಳವಾರ ದಿಢೀರನೇ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದಾರೆ.

1999 ರಲ್ಲಿ ಮೊದಲ ದರ್ಜೆ ಕ್ರಿಕೆಟಿಗೆ ಪಾದಾರ್ಪಣೆ ಮಾಡುವ ಮೂಲಕ ತಮ್ಮ ಕ್ರಿಕೆಟ್ ಪಯಣ ಆರಂಭಿಸಿದ್ದ ಗೌತಮ್ ಗಂಭೀರ್, ಹಲವು ಸಂದರ್ಭಗಳಲ್ಲಿ ತಂಡದ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದ್ದರು.

2007ರ ಟ್ವೆಂಟಿ-20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಪರ ಗರಿಷ್ಠ ಸ್ಕೋರ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಗಂಭೀರ್ ಎರಡು ದಶಕಗಳ ವೃತ್ತಿಜೀವನದಲ್ಲಿ 10,000ಕ್ಕೂ ಅಧಿಕ ಅಂತರ್‌ರಾಷ್ಟ್ರೀಯ ರನ್ ಗಳಿಸಿದ್ದಾರೆ. 2003ರಲ್ಲಿ ಏಕದಿನ ಕ್ರಿಕೆಟ್, 2004ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟಿರುವ ಗಂಭೀರ್ 58 ಟೆಸ್ಟ್‌ನಲ್ಲಿ 4,154 ರನ್, 147 ಏಕದಿನದಲ್ಲಿ 5,238 ರನ್ ಹಾಗೂ 37 ಟಿ-20ಯಲ್ಲಿ 932 ರನ್ ಕಲೆ ಹಾಕಿದ್ದಾರೆ.

ಈ ಬಗ್ಗೆ ಇಂದು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ವೀಡಿಯೊ ಮಾಡಿದ್ದು, ಇದನ್ನು ತಮ್ಮ ಟ್ವಿಟರ್‌ನಲ್ಲೂ ಹಾಕಿಕೊಂಡಿದ್ದಾರೆ. ”ಭಾರವಾದ ಹೃದಯದಿಂದ ನನ್ನ ಜೀವನದುದ್ದಕ್ಕೂ ಹೆದರುತ್ತಿದ್ದ ಈ ನಿರ್ಧಾರವನ್ನು ಘೋಷಿಸುತ್ತಿದ್ದೇನೆ” ಎಂದು ಭಾವನಾತ್ಮಕ ಟ್ವೀಟ್‌ ಅನ್ನು ಸಹ ಗಂಭೀರ್ ಮಾಡಿದ್ದಾರೆ.

ಎಡಗೈ ಆರಂಭಿಕ ದಾಂಡಿಗ ಗಂಭೀರ್ 2016ರ ನವೆಂಬರ್‌ನಲ್ಲಿ ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿ ಭಾರತವನ್ನು ಪ್ರತಿನಿಧಿಸಿದ್ದರು.

vishwanews24

 

 

 

Vishwa News 24

Recent Posts

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

11 minutes ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

30 minutes ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago