Featured

ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು – vishwanews24

ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ‌ ನಗರದ ಮದಿಹಾಳ ಸಿದ್ದರಾಮ ಕಾಲೊನಿಯಲ್ಲಿ ನಡೆದಿದೆ.

ಶ್ರೇಯಸ್ ಸಿನ್ನೂರ (16) ಮೃತ ಬಾಲಕ. ತನ್ನ ಮನೆಯ ಹಿಂದೆ ಕ್ರಿಕೆಟ್  ಆಡಲು ಹೋಗಿದ್ದು, ಆಟದ ವೇಳೆ ಬಾಲ್ ಹಿಡಿಯಲು ಹೋದಾಗ ಶ್ರೇಯಸ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ.

ಶ್ರೇಯಸ್ ತನ್ನ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಧಾರವಾಡ ರಾಜೀವ್‌ ಗಾಂಧಿ ಶಾಲೆಯಲ್ಲಿ SSLC ಓದುತಿದ್ದ. ಸಂಜೆ ಶಾಲೆಯಿಂದ ಬಂದ ಮಗ ಮನೆಯಲ್ಲಿ ಕುಳಿತಾಗ ಗೆಳೆಯ ಆಟಕ್ಕೆ ಕರೆದಿದ್ದಾನೆ. ತಮ್ಮ ಮನೆಯ ಹಿಂದೆ ಕಾಮಗಾರಿ ಪ್ರಗತಿಯಲ್ಲಿದ್ದ ಕಟ್ಟದ ಬಳಿ ಕ್ರಿಕೆಟ್‌ ಆಡಲು ಹೋದ ಶ್ರೇಯಸ್‌ಗೆ 10 ನಿಮಿಷದಲ್ಲಿ ಕರೆಂಟ್‌ ಶಾಕ್‌ಗೆ ತಗುಲಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ಮಗನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಪ್ರಯೋಜನವಾಗಲಿಲ್ಲ ಎಂದು ಮೃತ ಬಾಲಕನ ತಂದೆ ಅಶೋಕ್‌ ತಿಳಿಸಿದ್ದಾರೆ.

ಇನ್ನೂ ಶ್ರೇಯಸ್ ಉಳಿಸಲು ಹೋಗಿದ್ದ 10 ವರ್ಷದ ಮತ್ತೋರ್ವ ಬಾಲಕ ಪ್ರಣವ್‌ ಎಂಬಾತನಿಗೂ ವಿದ್ಯುತ್ ಸ್ಪರ್ಶಿಸಿ ಸುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಮೃತ ಶ್ರೇಯಸ್‌ನ ಮೃತದೇಹವನ್ನು ಇಲ್ಲಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಇತ್ತ ಮಗನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಧಾರವಾಡದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago