ಧಾರವಾಡ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ನಗರದ ಮದಿಹಾಳ ಸಿದ್ದರಾಮ ಕಾಲೊನಿಯಲ್ಲಿ ನಡೆದಿದೆ.
ಶ್ರೇಯಸ್ ಸಿನ್ನೂರ (16) ಮೃತ ಬಾಲಕ. ತನ್ನ ಮನೆಯ ಹಿಂದೆ ಕ್ರಿಕೆಟ್ ಆಡಲು ಹೋಗಿದ್ದು, ಆಟದ ವೇಳೆ ಬಾಲ್ ಹಿಡಿಯಲು ಹೋದಾಗ ಶ್ರೇಯಸ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ.
ಶ್ರೇಯಸ್ ತನ್ನ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಧಾರವಾಡ ರಾಜೀವ್ ಗಾಂಧಿ ಶಾಲೆಯಲ್ಲಿ SSLC ಓದುತಿದ್ದ. ಸಂಜೆ ಶಾಲೆಯಿಂದ ಬಂದ ಮಗ ಮನೆಯಲ್ಲಿ ಕುಳಿತಾಗ ಗೆಳೆಯ ಆಟಕ್ಕೆ ಕರೆದಿದ್ದಾನೆ. ತಮ್ಮ ಮನೆಯ ಹಿಂದೆ ಕಾಮಗಾರಿ ಪ್ರಗತಿಯಲ್ಲಿದ್ದ ಕಟ್ಟದ ಬಳಿ ಕ್ರಿಕೆಟ್ ಆಡಲು ಹೋದ ಶ್ರೇಯಸ್ಗೆ 10 ನಿಮಿಷದಲ್ಲಿ ಕರೆಂಟ್ ಶಾಕ್ಗೆ ತಗುಲಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ಮಗನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಪ್ರಯೋಜನವಾಗಲಿಲ್ಲ ಎಂದು ಮೃತ ಬಾಲಕನ ತಂದೆ ಅಶೋಕ್ ತಿಳಿಸಿದ್ದಾರೆ.
ಇನ್ನೂ ಶ್ರೇಯಸ್ ಉಳಿಸಲು ಹೋಗಿದ್ದ 10 ವರ್ಷದ ಮತ್ತೋರ್ವ ಬಾಲಕ ಪ್ರಣವ್ ಎಂಬಾತನಿಗೂ ವಿದ್ಯುತ್ ಸ್ಪರ್ಶಿಸಿ ಸುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಮೃತ ಶ್ರೇಯಸ್ನ ಮೃತದೇಹವನ್ನು ಇಲ್ಲಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಇತ್ತ ಮಗನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಬಂಧ ಧಾರವಾಡದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…