Featured

ಕ್ರಿಕೆಟ್ ಬಿಟ್ಟು ಬಾಲಿವುಡ್‌ಗೆ ಎಂಟ್ರಿ ಕೊಡ್ತಾರಾ ವಿರಾಟ್ ಕೊಹ್ಲಿ,?

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿ ಅಭಿಮಾನಿಗಳು ವಿರಾಟ್ ಬಾಲಿವುಡ್‍ಗೆ ಪ್ರವೇಶಿಸಿದ್ದಾರಾ ಎಂದು ಯೋಚಿಸುತ್ತಿದ್ದಾರೆ.

ವಿರಾಟ್ ಇಂದು ಬೆಳಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ. ಆ ಪೋಸ್ಟರ್ ಗೆ ‘ಟ್ರೈಲರ್- ದಿ ಮೂವಿ’ ಎಂದು ಹೆಸರಿಡಲಾಗಿದೆ. ಸದ್ಯ ವಿರಾಟ್ ಈ ಪೋಸ್ಟರ್ ಶೇರ್ ಮಾಡಿ ಅದಕ್ಕೆ, “10 ವರ್ಷಗಳ ನಂತರ ಮತ್ತೊಂದು ಡೆಬ್ಯೂ” ಎಂದು ಕ್ಯಾಪ್ಷನ್ ನೀಡಿದ್ದಾರೆ.

 

ವಿರಾಟ್ ಅವರ ಟ್ರೈಲರ್-ದಿ ಮೂವಿ ಪೋಸ್ಟರ್ ಮೇಲೆ ಇನ್ಟ್ರಡ್ಯೂಸಿಂಗ್ ವಿರಾಟ್ ಕೊಹ್ಲಿ ಎಂದು ಬರೆಯಲಾಗಿದೆ. ಅಲ್ಲದೇ ಈ ಪ್ರೊಡಕ್ಷನ್ ಅನ್ನು ವಿರಾಟ್ ಅವರ ವ್ರಾಂಗ್ ಸಂಸ್ಥೆ ಪ್ರೊಡಕ್ಷನ್ ಮಾಡಲಿದೆ. ಈ ಪೋಸ್ಟರ್ ಕೆಳಭಾಗದಲ್ಲಿ ಸೆಪ್ಟೆಂಬರ್ 28, 2018 ಬಿಡುಗಡೆ ಎಂದು ಕೂಡ ಬರೆಯಲಾಗಿದೆ.

ಈ ಪೋಸ್ಟರ್ ನಲ್ಲಿ ವಿರಾಟ್ ಇಂಟೇನ್ಸ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ಅವರ ಕಾಲು ಗಾಳಿಯಲ್ಲಿ ತೇಲಾಡುತ್ತಿದೆ. ಪೋಸ್ಟರ್ ನಲ್ಲಿ ವಿರಾಟ್ ಹಿಂದೆ ಸ್ಫೋಟಗೊಂಡ ಬೆಂಕಿಯ ಬ್ಯಾಕ್‍ಗ್ರೌಂಡ್ ಇದೆ. ಈ ಪೋಸ್ಟರ್ ನೋಡಿದರೆ, ವಿರಾಟ್ ಆ್ಯಕ್ಷನ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ವಿರಾಟ್ ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಎಂಬುದು ಅಧಿಕೃತವಾಗಿಲ್ಲ. ಈ ಪೋಸ್ಟರ್ ನೋಡಿ ಕೆಲವರು ವಿರಾಟ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಿದರೆ, ಇನ್ನೂ ಕೆಲವರು ವ್ರಾಂಗ್ ಬ್ರಾಂಡ್‍ನ ಜಾಹೀರಾತಿಗಾಗಿ, ಪ್ರಚಾರಕ್ಕಾಗಿ ಈ ಪೋಸ್ಟರ್ ಬಿಡುಗಡೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago