Featured

ಕ್ರಿಕೆಟ್ ಬಿಟ್ಟು ಬಾಲಿವುಡ್‌ಗೆ ಎಂಟ್ರಿ ಕೊಡ್ತಾರಾ ವಿರಾಟ್ ಕೊಹ್ಲಿ,?

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿ ಅಭಿಮಾನಿಗಳು ವಿರಾಟ್ ಬಾಲಿವುಡ್‍ಗೆ ಪ್ರವೇಶಿಸಿದ್ದಾರಾ ಎಂದು ಯೋಚಿಸುತ್ತಿದ್ದಾರೆ.

ವಿರಾಟ್ ಇಂದು ಬೆಳಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ. ಆ ಪೋಸ್ಟರ್ ಗೆ ‘ಟ್ರೈಲರ್- ದಿ ಮೂವಿ’ ಎಂದು ಹೆಸರಿಡಲಾಗಿದೆ. ಸದ್ಯ ವಿರಾಟ್ ಈ ಪೋಸ್ಟರ್ ಶೇರ್ ಮಾಡಿ ಅದಕ್ಕೆ, “10 ವರ್ಷಗಳ ನಂತರ ಮತ್ತೊಂದು ಡೆಬ್ಯೂ” ಎಂದು ಕ್ಯಾಪ್ಷನ್ ನೀಡಿದ್ದಾರೆ.

 

ವಿರಾಟ್ ಅವರ ಟ್ರೈಲರ್-ದಿ ಮೂವಿ ಪೋಸ್ಟರ್ ಮೇಲೆ ಇನ್ಟ್ರಡ್ಯೂಸಿಂಗ್ ವಿರಾಟ್ ಕೊಹ್ಲಿ ಎಂದು ಬರೆಯಲಾಗಿದೆ. ಅಲ್ಲದೇ ಈ ಪ್ರೊಡಕ್ಷನ್ ಅನ್ನು ವಿರಾಟ್ ಅವರ ವ್ರಾಂಗ್ ಸಂಸ್ಥೆ ಪ್ರೊಡಕ್ಷನ್ ಮಾಡಲಿದೆ. ಈ ಪೋಸ್ಟರ್ ಕೆಳಭಾಗದಲ್ಲಿ ಸೆಪ್ಟೆಂಬರ್ 28, 2018 ಬಿಡುಗಡೆ ಎಂದು ಕೂಡ ಬರೆಯಲಾಗಿದೆ.

ಈ ಪೋಸ್ಟರ್ ನಲ್ಲಿ ವಿರಾಟ್ ಇಂಟೇನ್ಸ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ಅವರ ಕಾಲು ಗಾಳಿಯಲ್ಲಿ ತೇಲಾಡುತ್ತಿದೆ. ಪೋಸ್ಟರ್ ನಲ್ಲಿ ವಿರಾಟ್ ಹಿಂದೆ ಸ್ಫೋಟಗೊಂಡ ಬೆಂಕಿಯ ಬ್ಯಾಕ್‍ಗ್ರೌಂಡ್ ಇದೆ. ಈ ಪೋಸ್ಟರ್ ನೋಡಿದರೆ, ವಿರಾಟ್ ಆ್ಯಕ್ಷನ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ವಿರಾಟ್ ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಎಂಬುದು ಅಧಿಕೃತವಾಗಿಲ್ಲ. ಈ ಪೋಸ್ಟರ್ ನೋಡಿ ಕೆಲವರು ವಿರಾಟ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಿದರೆ, ಇನ್ನೂ ಕೆಲವರು ವ್ರಾಂಗ್ ಬ್ರಾಂಡ್‍ನ ಜಾಹೀರಾತಿಗಾಗಿ, ಪ್ರಚಾರಕ್ಕಾಗಿ ಈ ಪೋಸ್ಟರ್ ಬಿಡುಗಡೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago