ದಕ್ಷಿಣ ಕನ್ನಡ

ಕ್ರಿಶ್ಚಿಯನ್, ಇಸ್ಲಾಂ ವಿಷಯ ಯಾಕೆ ಶಾಲಾ ಪಠ್ಯವಾಗಬೇಕು ??

ಮಂಗಳೂರು : ಶಾಲಾ ಪಠ್ಯ ಪುಸ್ತಕದಲ್ಲಿ ಕ್ರಿಶ್ಚಿಯನ್ ಮತ್ತು ಇಸ್ಲಾಂ ಪಠ್ಯ ಸೇರಿಸಿಕೊಳ್ಳುವ ಔಚಿತ್ಯವೇನಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಪುರಭವನದಲ್ಲಿ ವಿಹಿಂಪ ಮತ್ತು ಬಜರಂಗ ದಳ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಪುಸ್ತಕ, ವಿದ್ಯಾರ್ಥಿವೇತನ ಮತ್ತು ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಳಿನ್, “ಭಾರತ ಶ್ರೀಮಂತ ಪರಂಪರೆಯ ದೇಶ. ಇಲ್ಲಿನ ಮಕ್ಕಳು ರಾಮಾಯಣ ಮತ್ತು ಮಹಾಭಾರತದಂತಹ ಮಹಾಗ್ರಂಥಗಳಲ್ಲಿರುವ ನೈತಿಕತೆ ಅಳವಡಿಸಿಕೊಂಡವರು. ಆದರೆ ಈಗ ಈ ಗ್ರಂಥಗಳಿಗೂ ಕೋಮುಬಣ್ಣ ಹಚ್ಚಲಾಗಿದೆ. ಬಜರಂಗ ದಳ ಮತ್ತು ಇತರ ಹಿಂದೂ ಸಂಘಟನೆಗಳನ್ನು ಟೀಕಿಸುವ ಮುಂಚೆ ಈ ಸಂಘಟನೆಗಳ ಸದಸ್ಯರ ಬಲಿದಾನ ನೆನಪಿಸಿಕೊಳ್ಳಬೇಕು” ಎಂದರು.

“ಕ್ರಿಶ್ಚಿಯನ್ ಮತ್ತು ಇಸ್ಲಾಂ ವಿಷಯ ಶಾಲಾ ಪಠ್ಯಗಳಲ್ಲಿ ಸೇರ್ಪಡೆಗೊಂಡಿರುವಾಗಲೂ ಇಲ್ಲಿ ಯಾವುದೇ ಪ್ರತಿಭಟನೆ ನಡೆಯುವುದಿಲ್ಲ. ಅನುದಾನರಹಿತ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಿದರೆ ಶಿಕ್ಷಣ ಇಲಾಖೆ ತಡ ಮಾಡದೆ ಅಂತಹ ಶಾಲೆಗಳಿಗೆ ನೊಟೀಸು ಜಾರಿ ಮಾಡುತ್ತದೆ. ಇತರ ಸಮುದಾಯದ ಪಠ್ಯ ಸೇರಿಸುವುದಿದ್ದರೆ ಈಗ ಯಾವುದು ಕೋಮುವಾದ ಎಂದು ಇಲಾಖೆಯೇ ಹೇಳಬೇಕು” ಎಂದು ವಿಹಿಂಪ ಪ್ರಾಂತೀಯ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿದರು.

ಮಕ್ಕಳು ಎಲ್ಲ ಧರ್ಮಗಳ ಮೂಲತತ್ವ ತಿಳಿದುಕೊಳ್ಳಬೇಕು. ಆದರೆ, ಮಕ್ಕಳು ಚರ್ಚುಗಳಿಗೆ ಅಥವಾ ಮಸೀದಿಗಳಿಗೆ ಹೋಗಬೇಕೆನ್ನುವ ನಿರ್ದೇಶನ ಮಾತ್ರ ಅಸಂಗತ ಎಂದವರು ಹೇಳಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago