ಮಂಗಳೂರು : ಶಾಲಾ ಪಠ್ಯ ಪುಸ್ತಕದಲ್ಲಿ ಕ್ರಿಶ್ಚಿಯನ್ ಮತ್ತು ಇಸ್ಲಾಂ ಪಠ್ಯ ಸೇರಿಸಿಕೊಳ್ಳುವ ಔಚಿತ್ಯವೇನಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಪುರಭವನದಲ್ಲಿ ವಿಹಿಂಪ ಮತ್ತು ಬಜರಂಗ ದಳ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಪುಸ್ತಕ, ವಿದ್ಯಾರ್ಥಿವೇತನ ಮತ್ತು ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಳಿನ್, “ಭಾರತ ಶ್ರೀಮಂತ ಪರಂಪರೆಯ ದೇಶ. ಇಲ್ಲಿನ ಮಕ್ಕಳು ರಾಮಾಯಣ ಮತ್ತು ಮಹಾಭಾರತದಂತಹ ಮಹಾಗ್ರಂಥಗಳಲ್ಲಿರುವ ನೈತಿಕತೆ ಅಳವಡಿಸಿಕೊಂಡವರು. ಆದರೆ ಈಗ ಈ ಗ್ರಂಥಗಳಿಗೂ ಕೋಮುಬಣ್ಣ ಹಚ್ಚಲಾಗಿದೆ. ಬಜರಂಗ ದಳ ಮತ್ತು ಇತರ ಹಿಂದೂ ಸಂಘಟನೆಗಳನ್ನು ಟೀಕಿಸುವ ಮುಂಚೆ ಈ ಸಂಘಟನೆಗಳ ಸದಸ್ಯರ ಬಲಿದಾನ ನೆನಪಿಸಿಕೊಳ್ಳಬೇಕು” ಎಂದರು.
“ಕ್ರಿಶ್ಚಿಯನ್ ಮತ್ತು ಇಸ್ಲಾಂ ವಿಷಯ ಶಾಲಾ ಪಠ್ಯಗಳಲ್ಲಿ ಸೇರ್ಪಡೆಗೊಂಡಿರುವಾಗಲೂ ಇಲ್ಲಿ ಯಾವುದೇ ಪ್ರತಿಭಟನೆ ನಡೆಯುವುದಿಲ್ಲ. ಅನುದಾನರಹಿತ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಿದರೆ ಶಿಕ್ಷಣ ಇಲಾಖೆ ತಡ ಮಾಡದೆ ಅಂತಹ ಶಾಲೆಗಳಿಗೆ ನೊಟೀಸು ಜಾರಿ ಮಾಡುತ್ತದೆ. ಇತರ ಸಮುದಾಯದ ಪಠ್ಯ ಸೇರಿಸುವುದಿದ್ದರೆ ಈಗ ಯಾವುದು ಕೋಮುವಾದ ಎಂದು ಇಲಾಖೆಯೇ ಹೇಳಬೇಕು” ಎಂದು ವಿಹಿಂಪ ಪ್ರಾಂತೀಯ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿದರು.
ಮಕ್ಕಳು ಎಲ್ಲ ಧರ್ಮಗಳ ಮೂಲತತ್ವ ತಿಳಿದುಕೊಳ್ಳಬೇಕು. ಆದರೆ, ಮಕ್ಕಳು ಚರ್ಚುಗಳಿಗೆ ಅಥವಾ ಮಸೀದಿಗಳಿಗೆ ಹೋಗಬೇಕೆನ್ನುವ ನಿರ್ದೇಶನ ಮಾತ್ರ ಅಸಂಗತ ಎಂದವರು ಹೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…