ಮುಂಬೈ: ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆಗೆ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಜನವರಿ 2ರ ವರೆಗೂ ಕರ್ಫ್ಯೂ ವಿಧಿಸಿದ್ದು, 5 ಕ್ಕಿಂತ ಹೆಚ್ಚು ಮಂದಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಆದೇಶಿಸಿದೆ.
ಮುಂಬೈ ಪೊಲೀಸ್ ಕೇಂದ್ರ ಕಚೇರಿಯಿಂದ ಈ ಆದೇಶ ಪ್ರಕಟಗೊಂಡಿದ್ದು, ಜನವರಿ 2ರ ವರೆಗೂ ಶಸ್ತ್ರಾಸ್ತ್ರಗಳು, ಬಂದೂಕುಗಳು, ಕತ್ತಿಗಳು ಮತ್ತು ಇತರ ಆಯುಧಗಳೊಂದಿಗೆ ಸಂಚಾರದ ಮೇಲೂ ನಿಷೇಧವನ್ನು ವಿಧಿಸಲಾಗಿದೆ.
ಅಧಿಕೃತ ಸೂಚನೆಯ ಪ್ರಕಾರ, ಮದುವೆ ಸಮಾರಂಭಗಳು, ಅಂತ್ಯಕ್ರಿಯೆ ಸಭೆಗಳು, ಸ್ಮಶಾನಗಳಿಗೆ ಹೋಗುವ ದಾರಿಯಲ್ಲಿ ಧ್ವನಿವರ್ಧಕಗಳು, ವಾದ್ಯಗಳು, ಬ್ಯಾಂಡ್ಗಳನ್ನು ನುಡಿಸುವಂತಿಲ್ಲ, ಪಟಾಕಿ ಹೊಡೆಯುವಂತಿಲ್ಲ. ಕ್ಲಬ್ಗಳು, ಸಹಕಾರ ಸಂಘಗಳು ಮತ್ತು ಇತರ ಸಂಘಗಳ ಮೆರವಣಿಗೆಗಳ ಮೇಲೆ ನಿಷೇಧವನ್ನು ವಿಧಿಸಲಾಗಿದೆ.
ಸಾರ್ವಜನಿಕ ಚಲನಚಿತ್ರ ಪ್ರದರ್ಶನ ಸ್ಥಳಗಳು ಅಥವಾ ಸುತ್ತಮುತ್ತಲಿನ ಯಾವುದೇ ಸ್ಥಳಗಳಲ್ಲಿ, ನಾಟಕಗಳು ಅಥವಾ ಕಾರ್ಯಕ್ರಮಗಳನ್ನು ವೀಕ್ಷಿಸುವ ಉದ್ದೇಶಕ್ಕಾಗಿ ಸಭೆ ನಡೆಸುವುದು ನಿಷೇಧಿಸಲಾಗಿದೆ. ಸರ್ಕಾರಿ ಕಚೇರಿಗಳ ಸುತ್ತಲೂ ಸರ್ಕಾರಿ ಅಥವಾ ಅರೆ ಸರ್ಕಾರಿ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ಅನಗತ್ಯ ಜನ ಸೇರುವಂತಿಲ್ಲ. ಶಾಲಾ ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳು, ಕಾರ್ಖಾನೆಗಳಲ್ಲೂ ಸಾಮಾನ್ಯ ವ್ಯವಹಾರಗಳ ಸಭೆಗಳನ್ನು ನಿಷೇಧಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…