Featured

ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ – vishwanews24

ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ

ಉಡುಪಿ: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆಯಾಗಿದೆ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯ ತೀವ್ರ ಕಳವಳ ಹಾಗೂ ನೋವು ವ್ಯಕ್ತಪಡಿಸಿದೆ

ಜಗತ್ತಿಗೆ ಶಾಂತಿ, ಪ್ರೀತಿ, ಕ್ಷಮೆಯನ್ನು ಭೋದಿಸಿದ ಯೇಸು ಸ್ವಾಮಿಯ ಜನನದ ಹಬ್ಬ ಈವರ್ಷ ಭಾರತದ ಕ್ರೈಸ್ತ ಸಮುದಾಯಕ್ಕೆ ಭಯ ಮತ್ತು ಆತಂಕವನ್ನು ಸೃಷ್ಟಿ ಮಾಡಿದೆ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಾದ ಕೇರಳ, ನವದೆಹಲಿ ಉತ್ತರಪ್ರದೇಶ, ರಾಜಸ್ಥಾನ, ಉತ್ತರಕಾಂಡ, ಒರಿಸ್ಸಾ ಸೇರಿದಂತೆ ವಿವಿಧೆಡೆ ಕ್ರಿಸ್ಮಸ್ ಆಚರಣೆಯ ವೇಳೆ ಮತಾಂಧ ವ್ಯಕ್ತಿಗಳು ಹಲ್ಲೆ ನಡೆಸಿರುವುದು ಹಬ್ಬದ ಸಂಭ್ರಮಕ್ಕೆ ಕಪ್ಪು ಚುಕ್ಕೆಯಾಗಿದೆ. ಹಾಳುಗೆಡವಿರುವುದು ಸಂವಿಧಾನದ ತತ್ವದಡಿ ನಂಬಿಕೆ ಇಟ್ಟು ಭಾರತ ಒಂದು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಬದುಕುತ್ತಿರುವ ಕ್ರೈಸ್ತ ಸಮುದಾಯಕ್ಕೆ ನೋವು ತಂದಿದೆ.

ದೇಶದ ಪ್ರಧಾನ ಮಂತ್ರಿಗಳು ದೆಹಲಿಯ ಚರ್ಚಿನಲ್ಲಿ ಕ್ರಿಸ್ಮಸ್ ಪ್ರಾರ್ಥನೆಗೆ ಜೊತೆಯಾಗುತ್ತಿದ್ದರೆ ಇನ್ನೊಂದೆಡೆ ದೇಶದ ವಿವಿಧ ರಾಜ್ಯಗಳಲ್ಲಿ ಮತಾಂಧ ವ್ಯಕ್ತಿಗಳ ಅದೇ ಕ್ರಿಸ್ಮಸ್ ಹಬ್ಬದ ಆಚರಣೆಯ ಮೇಲೆ ದಾಳಿ ನಡೆಸುತ್ತಿದ್ದಾರೆ. ಪ್ರಧಾನಿಯವರ ಕ್ರಿಸ್ಮಸ್ ಹಬ್ಬದ ಕಾಳಜಿ ಶ್ಲಾಘನೀಯವಾದರೂ ಅದೇ ವೇಳೆ ಅವರ ಅನುಯಾಯಿಗಳು ಎನಿಸಿಕೊಂಡವರು ದೇಶದಾದ್ಯಂತ ಕ್ರಿಸ್ಮಸ್ ಆಚರಣೆಗಳ ಮೇಲೆ ದಾಳಿ ನಡೆಸಿರುವುದು ಸಂವಿಧಾನದ ಮೌಲ್ಯಗಳ ಮೇಲೆ ಸವಾರಿ ಮಾಡಿದಂತಿದೆ.

ಭಾರತದಲ್ಲಿ ಪ್ರತಿಯೊಂದು ಧರ್ಮಕ್ಕೂ ಅವರ ಆರಾಧನೆಯನ್ನು ಮಾಡಿಕೊಂಡು ಹೋಗಲು ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿದ್ದು ಅದಕ್ಕೆ ಬೆದರಿಕೆ ಹಾಕುವ ವರ್ತನೆಯನ್ನು ಯಾರೂ ಕೂಡ ಸಹಿಸುವಂತಿಲ್ಲ. ಈ ವರ್ಷದ ಕ್ರಿಸ್ಮಸ್ ಆಚರಣೆಗೆ ಕ್ರೈಸ್ತ ಬಾಂಧವರ ಮೇಲೆ ನಡೆದ ಹಲ್ಲೆ ದೌರ್ಜನ್ಯಗಳು ಒಂದು ರೀತಿಯ ನೋವಿನ ಬಹುಮಾನ ನೀಡಿದಂತಾಗಿದೆ. ಅಲ್ಪಸಂಖ್ಯಾತರು ದೇಶದ ಆಡಳಿತದಲ್ಲಿ ಇನ್ನೂ ಕೂಡ ಸುಭದ್ರವಾಗಿಲ್ಲ ಎನ್ನುವುದು ಇದರಿಂದ ಸ್ಪಷ್ಟಪಡಿಸಿದಂತಾಗಿದೆ.

ದೇಶದ ಎಲ್ಲಾ ರಾಜ್ಯಗಳು ಅಲ್ಪಸಂಖ್ಯಾತ ಸಮುದಾಯದ ರಕ್ಷಣೆಗೆ ಮೊದಲ ಆದ್ಯತೆ ನೀಡುವುದರೊಂದಿಗೆ ಇಂತಹ ಸಂವಿಧಾನ ವಿರೋಧಿ ಕೃತ್ಯಗಳನ್ನು ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೇಶದ ಆಡಳಿತದ ಚುಕ್ಕಾಣಿ ನಡೆಸುತ್ತಿರುವವರು ಎಲ್ಲಾ ರಾಜ್ಯಗಳಿಗೆ ಸೂಕ್ತ ನಿರ್ದೇಶನ ನೀಡುವುದರೊಂದಿಗೆ ಕ್ರೈಸ್ತ ಸಮುದಾಯ ಹಾಗೂ ಅವರು ನಡೆಸುತ್ತಿರುವ ಎಲ್ಲಾ ಸಂಸ್ಥೆಗಳಿಗೆ ಭದ್ರತೆ ನೀಡುವಂತೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago