ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಪ್ರಾರ್ಥನಾ ಮಂದಿರವೊಂದರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಾರೆ ಎಂಬ ಆರೋಪ ಹೊರಿಸಿ ಅದರ ಕ್ರೈಸ್ತರು ಪೂಜಿಸುವ ಪವಿತ್ರ ಶಿಲುಬೆಯನ್ನು ನಿಷೇಧ ಮಾಡಬೇಕು ಎಂದು ಪೋಸ್ಟರ್ ಮಾಡಿರುವ ವರ್ತನೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ ಖಂಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಮಂಗಳೂರಿನ ಮುಲ್ಕಿಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಾರೆ ಎಂದು ಒಂದು ಸಂಸ್ಥೆಯ ವಿರುದ್ಧ ಪ್ರತಿಭಟನೆ ಇದೇ ಬರುವ26 ಕ್ಕೆ ಇದ್ದು, ಬಲವಂತದ ಮತಾಂತರ ತಪ್ಪು ,ಹಾಗೆ ಮಾಡಿದವರ ವಿರುದ್ಧ ಪ್ರತಿಭಟನೆ ಮಾಡುವುದು ಅದನ್ನು ಮಾಡುವ ಸಂಘಟನೆಯ ಹಕ್ಕಿನ ವ್ಯಾಪ್ರಿಯಲ್ಲಿ ಬರುತ್ತದೆ. ಆದರೆ ಕೆಲವರು ಮಾಡಿದ ತಪ್ಪಿಗೆ(ಮಾಡಿದ್ದರೆ) ಇಡೀ ಸಮುದಾಯದವರು ಪೂಜಿಸುವ ಪವಿತ್ರ ಶಿಲುಬೆಯನ್ನು ನಿಷೇಧ ಮಾಡಬೇಕು ಎಂದು ಪೋಸ್ಟರ್ ಮಾಡಿರುವುದು ಅವುಗಳನ್ನು ಹಂಚುವುದು ಸರ್ವಥಾ ತಪ್ಪು .
ಒಳ್ಳೆಯವರು ಕೆಟ್ಟವರು ಎಲ್ಲಾ ಕುಟುಂಬದಲ್ಲಿಯೂ ,ಊರಿನಲ್ಲಿಯೂ ,ಸಮುದಾಯದಲ್ಲಿಯೂ ,ದೇಶದಲ್ಲೂ ಇರುತ್ತಾರೆ. ಅವಿಭಜಿತ ದಕ್ಷಿಣ ಕನ್ನಡದಲ್ಲಿ ಕ್ರೈಸ್ತ ಸಮುದಾಯದವರು ಇತರ ಧರ್ಮೀಯರಿಗೆ ಸರಿಸಮಾನವಾಗಿ ಶೈಕ್ಷಣಿಕ ಸಂಸ್ಥೆಗಳನ್ನು ,ಆಸ್ಪತ್ರೆಗಳನ್ನು ನೂರಾರು ವರ್ಷಗಳಿಂದ ಅತ್ಯುತ್ತಮವಾಗಿ ನಡೆಸಿಕೊಂಡು ಬರುತ್ತಿದ್ದಾರೆ ಸಾಮಾಜಿಕ ಸಾಂಸ್ಕೃತಿಕ ಆರ್ಥಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಕೂಡಲೆ ಮಧ್ಯ ಪ್ರವೇಶಿಸಿ ಇಂತಹ ಪ್ರತಿಭಟನೆಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡುವ ವಿಚಾರಗಳಿಗೆ ಅವಕಾಶ ನೀಡಬಾರದಂತೆ ಅವರು ಆಗ್ರಹಿಸಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…