ಕ್ರೈಸ್ತ ಅಭಿವೃದ್ಧಿ ನಿಗಮ ರದ್ದು : ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿಉಗ್ರ ಹೋರಾಟ ನಡೆಸಲಾಗುವುದು : ಐವನ್ ಡಿಸೋಜ – Vishwanews24

ಕ್ರೈಸ್ತ ಅಭಿವೃದ್ಧಿ ನಿಗಮ ರದ್ದು : ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿಉಗ್ರ ಹೋರಾಟ ನಡೆಸಲಾಗುವುದು : ಐವನ್ ಡಿಸೋಜ – Vishwanews24

ಬೆಂಗಳೂರು: ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಸರ್ಕಾರ ರದ್ದು ಮಾಡಿದೆ. ಇದರಿಂದ ಸಮುದಾಯದ ಜನರಿಗೆ ನೋವಾಗಿದೆ. ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಹಿಂದೆ ಹೆಚ್.ಡಿ‌. ಕುಮಾರಸ್ವಾಮಿ ಅವರು ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಘೋಷಿಸಿದ್ದರು. 200 ಕೋಟಿ ರೂ.ಗಳನ್ನು ನಿಗಮಕ್ಕೆ ಇಡಲಾಗಿತ್ತು, ಅದರಲ್ಲಿ 75 ಕೋಟಿ ರೂ. ಮೀಸಲಿಟ್ಟಿತ್ತು. ಆದರೆ ಇದೀಗ ನಿಗಮವನ್ನು ರದ್ಧುಪಡಿಸಲಾಗಿದೆ ಎಂದರು.

ರಾಜ್ಯದಲ್ಲಿ ಸಮುದಾಯದ 30 ಲಕ್ಷ ಜನರಿದ್ದೇವೆ. 27 ಜಿಲ್ಲೆಗಳಲ್ಲಿ ನಮ್ಮ ಸಮುದಾಯ ಹರಡಿದೆ. ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ ನಮ್ಮ ಕೊಡುಗೆ ಅಪಾರ. ಇವತ್ತಿಗೂ ಆರ್ಥಿಕವಾಗಿ ಹಿಂದುಳಿದಿದೆ. ಆದರೆ ಅಭಿವೃದ್ದಿ ನಿಗಮ ಘೋಷಿಸಿ ತಡೆಹಿಡಿದಿದ್ದು ಏಕೆ? ಇದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರಿಸಬೇಕು ಎಂದು ಆಗ್ರಹಿಸಿದರು.

ನಮಗೆ ಆಸೆ ತೋರಿಸಿ ಏಕಾಏಕಿ ಈ ನಿರ್ಧಾರ ಮಾಡಿದ್ದು ಸರಿಯೇ? ನಮ್ಮ ಸಮುದಾಯಕ್ಕೆ ಇದರಿಂದ ತುಂಬಾ ನೋವಾಗಿದೆ. ನಿಮ್ಮ ಆದೇಶವನ್ನು ವಾಪಸ್ ಪಡೆಯಬೇಕು. ನಿಗಮ ಮಂಡಳಿ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು ಎಂದರು

ನಿಗಮ ರದ್ಧತಿಯ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇವೆ. ಆದೇಶ ವಾಪಸ್ ಪಡೆಯಲು ಆಗ್ರಹಿಸುತ್ತೇವೆ. ಆದೇಶ ವಾಪಸ್ ಪಡೆಯದೆ ಹೋದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಐವನ್ ಡಿಸೋಜಾ ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago