Featured

ಕ್ರೈಸ್ತ ಗ್ರೊಟ್ಟೋ ದ್ವಂಸ ಮಾಡಿ ಕೇಸರಿ ದ್ವಜ ಹಾರಿಸಿದ ಪ್ರಕರಣ : ಸ್ಥಳೀಯರಿಗೆ ಖಡಕ್ ಎಚ್ಚರಿಕೆ ನೀಡಿದ ಬಂಟ್ವಾಳ ಪೊಲೀಸ್‌ ಸರ್ಕಲ್‌ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ (ವಿಡಿಯೊ)

ವಿಟ್ಲ: ಕೊಳ್ನಾಡು ಗ್ರಾಮದ ಕುಂಟ್ರಕಳ ಎಂಬಲ್ಲಿ ಕ್ರೈಸ್ತ ಗ್ರೊಟ್ಟೋ ದ್ವಂಸ ಮಾಡಿ ಕಟ್ಟೆ ನಿರ್ಮಿಸಿ ಕೇಸರಿ ದ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಂಟ್ವಾಳ ಪೊಲೀಸ್‌ ಸರ್ಕಲ್‌ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ಖಡಕ್ ಎಚ್ಚರಿಕೆ ನೀಡಿದ ವಿಡಿಯೊ ತುಣುಕುಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎರಡು ಸಮುದಾಯದ ಸ್ಥಳೀಯರಿಗೆ ಸೌಹಾರ್ದದ ಪಾಠ ಹೇಳಿದ ಇನ್‌ಸ್ಪೆಕ್ಟರ್, ‘ನಿಮ್ಮ ಎರಡೂ ಸಮುದಾಯದ ಕಡೆಯಲ್ಲಿಯೂ ಇರೋದು ಧಾರ್ಮಿಕತೆ ಅಲ್ಲ, ಧಾರ್ಮಿಕ ವೈಷಮ್ಯ. ನೀವು ನಂಬುವ ಕೊರಗಜ್ಜನಿಗೆ ಎಷ್ಟು ಗೌರವ ಇದೆಯೋ, ಅಷ್ಟೇ ಗೌರವ ಕ್ರೈಸ್ತರ ಗ್ರೊಟ್ಟೋಗೂ ಇದೆ, ಮುಸ್ಲಿಮರ ಮಸೀದಿಗೂ ಇದೆ ಎನ್ನುವುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನಾವು ಖಾಕಿ ಧರಿಸಿದವರು. ನಮ್ಮ ಕಣ್ಣಿಗೆ ಎಲ್ಲರೂ ಸಮಾನ. ನಮಗೆ ಎಲ್ಲವೂ ಒಂದೇ. ಸಮಾಜದಲ್ಲಿ ಎಲ್ಲದಕ್ಕೂ ಒಂದು ರೀತಿ ನೀತಿ ಇದೆ. ಕಾನೂನಿನ ಪ್ರಕಾರ ನಡೆದುಕೊಳ್ಳುವುದನ್ನು ಮೊದಲು ಕಲಿಯಿರಿ. ಅತಿಕ್ರಮವಾಗಿ ಸರ್ಕಾರಿ ಜಾಗದಲ್ಲಿ ಕಟ್ಟುವುದು ಮತ್ತು ಕೆಡಹುವುದು ಎರಡು ಕೂಡಾ ತಪ್ಪೇ. ಈ ಬಗ್ಗೆ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಎರಡು ಕಡೆಯವರೂ ಅನವಶ್ಯಕವಾಗಿ ಗೊಂದಲಗಳನ್ನು ಹುಟ್ಟುಹಾಕುತ್ತಿದ್ದೀರಿ’ ಎಂದು ತಿಳಿ ಹೇಳಿದರು.

ಬಳಿಕ ಎರಡು ಗುಂಪುಗಳಿಗೂ ಎಚ್ಚರಿಕೆ ನೀಡಿದ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್, ‘ಯಾರು ಕೂಡಾ ವಿಷಬೀಜ ಬಿತ್ತುವ ಕೆಲಸ ಮಾಡಬೇಡಿ. ಎರಡೂ ಕಡೆಯ ಅಹವಾಲು ಸ್ವೀಕರಿಸಿದ್ದೇವೆ. ಕಾನೂನನ್ನು ಗೌರವಿಸಿ, ಪಾಲಿಸಿ. ಇಲ್ಲಿನ ಸಮಸ್ಯೆಯನ್ನು ಸರ್ಕಾರ ಬಗೆಹರಿಸುತ್ತದೆ’ ಎಂದು ಭರವಸೆ ನೀಡಿದ್ದಾರೆ. ‘ಇವೆಲ್ಲವನ್ನೂ ಮೀರಿ ಇಲ್ಲಿ ಸಮಸ್ಯೆ, ಗೊಂದಲ ಮಾಡ್ತೀವಿ ಅನ್ನೋದಾದ್ರೆ ನಿಮ್ಮ ತಾಕತ್ತು ಎಷ್ಟಿದೆ ನೋಡ್ವಾ. ನಮ್ಮ ತಾಕತ್ತೂ ನೋಡುವ!’ ಎಂಬ ಎಚ್ಚರಿಕೆಯ ಮಾತುಗಳನ್ನು ರವಾನಿಸಿದರು.

‘ಕಾನೂನಿಗೆ ಒಂದು ಮಾನ್ಯತೆ ಇದೆ. ಅದನ್ನು ಕಾಪಾಡಿಕೊಳ್ಳುವುದು ಕರ್ತವ್ಯ. ಸುಮ್ ಸುಮ್ನೆ ಪ್ರಕರಣವನ್ನು ಎಳೆದು ಹಾಕುವುದು ಎಂದರೆ ಇದು. ಪ್ರಮಾಣಿಕತೆಯಿಂದ ಕಷ್ಟಪಟ್ಟು ದುಡಿದುಕೊಂಡು ಇರುತ್ತಿದ್ದರೆ ಇದೆಲ್ಲ ಬರುತ್ತಿರಲಿಲ್ಲ’ ಎಂದು ಬುದ್ಧಿವಾದ ಹೇಳಿದ ಅವರು ‘ಇದು ಸರ್ಕಾರದ ಜಾಗ , ಇಲ್ಲಿ ಪೊಲೀಸರನ್ನು ಹಾಗೂ ಸರ್ಕಾರಿ ಅಧಿಕಾರಿಗಳನ್ನು ನೇಮಿಸಲಾಗಿದೆ . ಇದನ್ನು ಮೀರಿ ಸ್ಥಳದಲ್ಲಿ ಅಥವಾ ಊರಿನಲ್ಲಿ ಯಾರಾದರೂ ಕಿತಾಪತಿ ಮಾಡಿದರೆ ಜೋಕೆ. ನಮ್ಮ ಪೊಲೀಸ್ ಪವರ್ ತೋರಿಸಬೇಕಾಗುತ್ತದೆ ’ ಎಂದು ಕಟು ಎಚ್ಚರಿಕೆ ನೀಡಿದ್ದಾರೆ.

ನಾಗರಾಜ್ ಅವರ ಕಾರ್ಯವೈಖರಿಗೆ ಇದೀಗ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

 

 

 

 

 

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

22 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

22 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

22 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

22 hours ago