ಕ್ವಾರಂಟೈನ್ ಕಠಿಣಗೊಳಿಸಿದ ರಾಜ್ಯ ಸರಕಾರ : ಕೈಯಲ್ಲಿ ಮುದ್ರೆಯಿದ್ರೆ ದೇವಸ್ಥಾನಕ್ಕಿಲ್ಲ ಪ್ರವೇಶ : vishwanews24

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಅದ್ರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಠಿಣ ಕ್ವಾರಂಟೈನ್ ಆದೇಶ ಹೊರಡಿಸಿದ್ದು, ಕೈಯಲ್ಲಿ ಕ್ವಾರಂಟೈನ್ ಸೀಲ್ ಹೊಂದಿದ್ದರೇ ಅಂತವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧ ಹೇರಿದೆ.

ಹೊರ ರಾಜ್ಯದವರಿಂದಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಅದ್ರಲ್ಲೂ ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಸಾಂಸ್ಥಿಕ ಹಾಗೂ 7 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿತ್ತು.

ಇದೀಗ ಕ್ವಾರಂಟೈನ್ ಅವಧಿ ಮುಗಿಯುತ್ತಲೇ ಕೊರೊನಾ ಸೋಂಕು ವ್ಯಾಪಿಸುತ್ತಿರೋ ಹಿನ್ನೆಲೆಯ ಕ್ವಾರಂಟೈನ್ ಅವಧಿಯನ್ನು 21 ದಿನಗಳಿಗೆ ವಿಸ್ತರಿಸಲಾಗಿದೆ. ಹೀಗಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 14 ದಿನ ಹೋಮ್ ಕ್ವಾರಂಟೈನ್ ಒಳಪಡಿಸಲು ಸರಕಾರ ಆದೇಶಿಸಿದೆ, ವಸತಿ ಸಂಕೀರ್ಣಗಳ ವಸತಿ ಕಲ್ಯಾಣ ಸಮಿತಿ ಸದಸ್ಯರು ಸಹ ಈ ರೀತಿಯ ಉಲ್ಲಂಘನೆಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ಕ್ವಾರಂಟೈನ್ ಅವಧಿಯಲ್ಲಿ ಹೊರ ರಾಜ್ಯದವರು ಮನೆಗಳಲ್ಲಿಯೇ ಇರಬೇಕು ಎಂದು ಸೂಚಿಸಲಾಗಿದೆ.

ಇನ್ನು ಹೊರ ರಾಜ್ಯಗಳಿಂದ ಬರುವವರಿಗೆ ಮುಂಬೈಗೆ ಕ್ವಾರಂಟೈನ್ ಮುದ್ರೆಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಗಳು ಹಾಕಲೇ ಬೇಕು. ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಕಡ್ಡಾಯವಾಗಿ ಕ್ವಾರಂಟೈನ್ ಆದೇಶವನ್ನು ಪಾಲನೆ ಮಾಡಲೇಬೇಕು. ವಾಣಿಜ್ಯ ಮಹಿಳೆ, ಮಾಲ್, ಕಚೇರಿ, ಅಂಗಡಿ, ಹೋಟೆಲ್ ಹಾಗೂ ದೇವಸ್ಥಾನಗಳನ್ನು ಪ್ರವೇಶಿಸುವುದಕ್ಕೆ ನಿಷೇಧ ಹೇರಲಾಗಿದೆ. ಅಲ್ಲದೇ ಪ್ರವೇಶ ದ್ವಾರದಲ್ಲಿಯೇ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಕೈಯಲ್ಲಿ ಕ್ವಾರಂಟೈನ್ ಸೀಲ್ ಇದ್ದೂ ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಕೂಡಲೇ ಪೊಲೀಸ್ ಠಾಣೆಯ ಸಹಾಯವಾಣಿ 100 ಕರೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

15 minutes ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

34 minutes ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

49 minutes ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

52 minutes ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

1 hour ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago