ಕ್ವಾರಂಟೈನ್ ಕಠಿಣಗೊಳಿಸಿದ ರಾಜ್ಯ ಸರಕಾರ : ಕೈಯಲ್ಲಿ ಮುದ್ರೆಯಿದ್ರೆ ದೇವಸ್ಥಾನಕ್ಕಿಲ್ಲ ಪ್ರವೇಶ : vishwanews24

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಅದ್ರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಠಿಣ ಕ್ವಾರಂಟೈನ್ ಆದೇಶ ಹೊರಡಿಸಿದ್ದು, ಕೈಯಲ್ಲಿ ಕ್ವಾರಂಟೈನ್ ಸೀಲ್ ಹೊಂದಿದ್ದರೇ ಅಂತವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧ ಹೇರಿದೆ.

ಹೊರ ರಾಜ್ಯದವರಿಂದಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಅದ್ರಲ್ಲೂ ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಸಾಂಸ್ಥಿಕ ಹಾಗೂ 7 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿತ್ತು.

ಇದೀಗ ಕ್ವಾರಂಟೈನ್ ಅವಧಿ ಮುಗಿಯುತ್ತಲೇ ಕೊರೊನಾ ಸೋಂಕು ವ್ಯಾಪಿಸುತ್ತಿರೋ ಹಿನ್ನೆಲೆಯ ಕ್ವಾರಂಟೈನ್ ಅವಧಿಯನ್ನು 21 ದಿನಗಳಿಗೆ ವಿಸ್ತರಿಸಲಾಗಿದೆ. ಹೀಗಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 14 ದಿನ ಹೋಮ್ ಕ್ವಾರಂಟೈನ್ ಒಳಪಡಿಸಲು ಸರಕಾರ ಆದೇಶಿಸಿದೆ, ವಸತಿ ಸಂಕೀರ್ಣಗಳ ವಸತಿ ಕಲ್ಯಾಣ ಸಮಿತಿ ಸದಸ್ಯರು ಸಹ ಈ ರೀತಿಯ ಉಲ್ಲಂಘನೆಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ಕ್ವಾರಂಟೈನ್ ಅವಧಿಯಲ್ಲಿ ಹೊರ ರಾಜ್ಯದವರು ಮನೆಗಳಲ್ಲಿಯೇ ಇರಬೇಕು ಎಂದು ಸೂಚಿಸಲಾಗಿದೆ.

ಇನ್ನು ಹೊರ ರಾಜ್ಯಗಳಿಂದ ಬರುವವರಿಗೆ ಮುಂಬೈಗೆ ಕ್ವಾರಂಟೈನ್ ಮುದ್ರೆಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಗಳು ಹಾಕಲೇ ಬೇಕು. ಕ್ವಾರಂಟೈನ್ ಸೀಲ್ ಹಾಕಿಸಿಕೊಂಡವರು ಕಡ್ಡಾಯವಾಗಿ ಕ್ವಾರಂಟೈನ್ ಆದೇಶವನ್ನು ಪಾಲನೆ ಮಾಡಲೇಬೇಕು. ವಾಣಿಜ್ಯ ಮಹಿಳೆ, ಮಾಲ್, ಕಚೇರಿ, ಅಂಗಡಿ, ಹೋಟೆಲ್ ಹಾಗೂ ದೇವಸ್ಥಾನಗಳನ್ನು ಪ್ರವೇಶಿಸುವುದಕ್ಕೆ ನಿಷೇಧ ಹೇರಲಾಗಿದೆ. ಅಲ್ಲದೇ ಪ್ರವೇಶ ದ್ವಾರದಲ್ಲಿಯೇ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಕೈಯಲ್ಲಿ ಕ್ವಾರಂಟೈನ್ ಸೀಲ್ ಇದ್ದೂ ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಕೂಡಲೇ ಪೊಲೀಸ್ ಠಾಣೆಯ ಸಹಾಯವಾಣಿ 100 ಕರೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

8 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

8 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

9 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago